ಅಡಿಕೆ ವ್ಯಾಪಾರಕ್ಕಾಗಿ ನಕಲಿ ಬಿಲ್ ತಯಾರಿಸಿ ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಕೇರಳ ಮೂಲದವರಾಗಿದ್ದಾರೆ.
ಕೇರಳ ಮತ್ತು ಕರ್ನಾಟಕದ ಜಿಎಸ್ಟಿ ಗುಪ್ತಚರ ಘಟಕದ ಅಧಿಕಾರಿಗಳು ಈ ನಕಲಿ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಅಡಿಕೆ ವ್ಯಾಪಾರಕ್ಕಾಗಿ ನಕಲಿ ಇನ್ವಾಯ್ಸ್ಗಳನ್ನು ತಯಾರಿಸಿ ಅಡಿಕೆ ಸಾಗಾಟ ಮಾಡುತ್ತಿದ್ದರು. ಅಂತರ್ ರಾಜ್ಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಶ್ರಫ್ (48) ಮತ್ತು ಶೌಕತ್ (54) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರು. ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಕಣ್ಣೂರು ಮತ್ತು ಆಲಪ್ಪುಳದಿಂದ ಅವರನ್ನು ಬಂಧಿಸಲಾಗಿದೆ. ಈಗಿನ ಮಾಹಿತಿ ಪ್ರಕಾರ, ಸುಮಾರು 9.5 ಕೋಟಿಗಳಷ್ಟು ತೆರಿಗೆ ವಂಚನೆಯನ್ನು ಇದುವರೆಗೆ ಮಾಡಲಾಗಿದೆ ಎಂದು ಜಿಎಸ್ಟಿ ಇಲಾಖೆ ತಿಳಿಸಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…