ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.
ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು ಎಂಟು ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.
ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490