ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.
ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು ಎಂಟು ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.
ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…