ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.
ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು ಎಂಟು ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.
ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…