ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.
ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು ಎಂಟು ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.
ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…