Advertisement
ಸುದ್ದಿಗಳು

ನಕಲಿ ಅಂಕಪಟ್ಟಿ ನೀಡಿ ಪದವಿಗೆ ದಾಖಲು | ಎಂಟು ವಿದ್ಯಾರ್ಥಿಗಳು ಪತ್ತೆ

Share

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿ‌ಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.

ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ‌ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು‌ ಎಂಟು‌ ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ,‌ ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.

ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ‌ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

1 hour ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

5 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

14 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

15 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago