Advertisement
MIRROR FOCUS

ನಕಲಿ ಬೀಜಗಳ ಮಾರಾಟ ತಡೆಗೆ ಕ್ರಮ – ಬಜೆಟ್ ಅಧಿವೇಶನದಲ್ಲಿ ಬೀಜ ಕಾಯ್ದೆ–2026 ಮಂಡನೆ

Share

ನಕಲಿ ಹಾಗೂ ಕಳಪೆ ಬೀಜಗಳ ಮಾರಾಟವನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಹೊಸ ಕಾಯ್ದೆಯನ್ನು ರೂಪಿಸಲಾಗಿದ್ದು, ನೂತನ ಬೀಜ ಕಾಯ್ದೆ–2026ನ್ನು ಬರುವ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಡೆಸಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ದ ವೇಳೆ ಹಲವು ರೈತರು ಕಳಪೆ ಮತ್ತು ನಕಲಿ ಬೀಜಗಳ ಮಾರಾಟ ಕುರಿತು ದೂರುಗಳನ್ನು ಸಲ್ಲಿಸಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ನಕಲಿ ಬೀಜಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೊಸ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನೂತನ ಬೀಜ ಕಾಯ್ದೆಯು ರೈತರ ಹಿತ ರಕ್ಷಣೆಯೇ ಮುಖ್ಯ ಉದ್ದೇಶವಾಗಿದ್ದು, ಕಳಪೆ ಹಾಗೂ ನಕಲಿ ಬೀಜಗಳನ್ನು ಮಾರಾಟ ಮಾಡುವ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ದಂಡ ಮತ್ತು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ 1966ರ ಬೀಜಗಳ ಕಾಯ್ದೆಯಡಿ ಗರಿಷ್ಠ 500 ರೂಪಾಯಿ ದಂಡ ಮಾತ್ರ ವಿಧಿಸಬಹುದಾಗಿತ್ತು. ಆದರೆ ಹೊಸ ಕಾಯ್ದೆಯಡಿ 30 ಲಕ್ಷ ರೂಪಾಯಿವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಗುರಿಪಡಿಸುವ ಅವಕಾಶ ಇರಲಿದೆ ಎಂದು ಸಚಿವರು ವಿವರಿಸಿದರು.

ಹೊಸ ಕಾಯ್ದೆಯನ್ವಯ ಬೀಜ ಉತ್ಪಾದಿಸುವ ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗಿದ್ದು, ಇದರಿಂದ ಬೀಜಗಳ ಮೂಲವನ್ನು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗಲಿದೆ. ಇದು ನಕಲಿ ಬೀಜ ಜಾಲವನ್ನು ಭೇದಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಇದೇ ವೇಳೆ, ರೈತರ ನಡುವೆ ಪರಂಪರಗತವಾಗಿ ನಡೆದುಕೊಂಡು ಬಂದಿರುವ ಬೀಜಗಳ ಬಳಕೆ ಮತ್ತು ವಿನಿಮಯ ಪದ್ಧತಿಗೆ ನೂತನ ಕಾಯ್ದೆಯಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago