Advertisement
MIRROR FOCUS

ಅಯೋಧ್ಯೆ ರಾಮಮಂದಿರ ಅರ್ಚಕರೆಂದು ಹೇಳುವ ನಕಲಿ ವಿಡಿಯೋ ವೈರಲ್‌ | ವಿಡಿಯೋ ಶೇರ್‌ ಮಾಡಿದ ಕಾಂಗ್ರೆಸ್ ಮುಖಂಡ ಬಂಧನ |

Share

ಅಯೋಧ್ಯೆ ರಾಮ ಮಂದಿರ ಅರ್ಚಕ ಎಂದು ಹೇಳಿಕೊಂಡು ಅಶ್ಲೀಲ ಚಿತ್ರಗಳು ವೈರಲ್‌ ಆಗಿದ್ದವು. ಈ ವಿಡಿಯೋಗಳನ್ನು  ಶೇರ್ ಮಾಡಿದ್ದಕ್ಕಾಗಿ  ಕಾಂಗ್ರೆಸ್ ಮುಖಂಡನನ್ನು ಗುಜರಾತ್‌ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರದ ಅರ್ಚಕರೆಂದು ಹೇಳುವ ನಕಲಿ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದು ಈಗ  ಆಕ್ರೋಶಕ್ಕೆ ಗುರಿಯಾಗಿದೆ. ಅಶ್ಲೀಲ ಚಿತ್ರಗಳಲ್ಲಿ ಕಂಡುಬರುವ ವ್ಯಕ್ತಿ ಮೋಹಿತ್ ಪಾಂಡೆ ಎಂದು ಬಿಂಬಿಸಲಾಗುತ್ತಿದೆ. ಮೋಹಿತ್ ಪಾಂಡೆ ಅವರು ಇತ್ತೀಚೆಗೆ ಅಯೋಧ್ಯೆಯ ಶ್ರೀರಾಮ ಮಂದಿರದ ಮುಖ್ಯ ಅರ್ಚಕರಾಗಿ ಆಯ್ಕೆಯಾಗಿದ್ದರು.

ಕೆಲವು ಸಾಮಾಜಿಕ ಮಾಧ್ಯಮಗಳು  ಮೋಹಿತ್ ಪಾಂಡೆ ಅವರ ಹೆಸರಿನಲ್ಲಿ ನಕಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿವೆ. ಇದೇ ರೀತಿ  ಕಾಂಗ್ರೆಸ್ ನಾಯಕ ಹಿತೇಂದ್ರ ಪಿತಾಡಿಯಾ ಕೂಡ ಮೋಹಿತ್ ಪಾಂಡೆಯ ಎಂದು ಹೇಳುವ ಮೂಲಕ ಫೋಟೋಗಳು ಮತ್ತು ವೀಡಿಯೊಗಳನ್ನು ವಿಡಿಯೋ ಶೇರ್‌ ಮಾಡಿದ್ದರು. ಅರ್ಚಕರ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹಿತೇಂದ್ರ ಪಿತಾಡಿಯಾ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಹಿಂದೂಗಳ ಸುಮಾರು 200 ವರ್ಷಗಳ ಕನಸು ನನಸಾಗೋ ಕಾಲ ಹತ್ತಿರವಾಗುತ್ತಿದ್ದಂತೆಯೇ ಕಿಡಿಗೇಡಿಗಳು ಈಗ ಅರ್ಚಕರ ಬಗ್ಗೆಯೂ ಅಪಪ್ರಚಾರ ಆರಂಭಿಸಿದ್ದಾರೆ. ಹೀಗಾಗಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಅಯೋಧ್ಯೆ ರಾಮಮಂದಿರ ಅರ್ಚಕರಾಗಿ ನೇಮಕಗೊಂಡಿರುವ ಮೋಹಿತ್ ಪಾಂಡೆ ವಿರುದ್ಧ ನಕಲಿ ವಿಡಿಯೋ, ಫೋಟೋ ಹರಿಬಿಡಲಾಗಿದೆ. ಅರ್ಚಕ ಮೋಹಿತ್ ಪಾಂಡೆ ಮಹಿಳೆಯೊಬ್ಬರ ಜೊತೆ ಅಶ್ಲೀಲ ಭಂಗಿಯಲ್ಲಿದ್ದು, ಚುಂಬಿಸುತ್ತಿರುವಂತೆ ನಕಲಿ ವಿಡಿಯೋ ತಯಾರಿಸಲಾಗಿದೆ. ಇದು ಫೇಕ್ ವಿಡಿಯೋ ಎನ್ನುವುದು ದೃಢಪಟ್ಟಿದೆ.

Source :Organiser

Ayodhya: Congress leader held for sharing morphed pictures of porn star, claiming to be Ram Mandir pujari Mohit Pandey

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

22 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago