Advertisement
MIRROR FOCUS

ಅಯೋಧ್ಯೆ ರಾಮಮಂದಿರ ಅರ್ಚಕರೆಂದು ಹೇಳುವ ನಕಲಿ ವಿಡಿಯೋ ವೈರಲ್‌ | ವಿಡಿಯೋ ಶೇರ್‌ ಮಾಡಿದ ಕಾಂಗ್ರೆಸ್ ಮುಖಂಡ ಬಂಧನ |

Share

ಅಯೋಧ್ಯೆ ರಾಮ ಮಂದಿರ ಅರ್ಚಕ ಎಂದು ಹೇಳಿಕೊಂಡು ಅಶ್ಲೀಲ ಚಿತ್ರಗಳು ವೈರಲ್‌ ಆಗಿದ್ದವು. ಈ ವಿಡಿಯೋಗಳನ್ನು  ಶೇರ್ ಮಾಡಿದ್ದಕ್ಕಾಗಿ  ಕಾಂಗ್ರೆಸ್ ಮುಖಂಡನನ್ನು ಗುಜರಾತ್‌ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರದ ಅರ್ಚಕರೆಂದು ಹೇಳುವ ನಕಲಿ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದು ಈಗ  ಆಕ್ರೋಶಕ್ಕೆ ಗುರಿಯಾಗಿದೆ. ಅಶ್ಲೀಲ ಚಿತ್ರಗಳಲ್ಲಿ ಕಂಡುಬರುವ ವ್ಯಕ್ತಿ ಮೋಹಿತ್ ಪಾಂಡೆ ಎಂದು ಬಿಂಬಿಸಲಾಗುತ್ತಿದೆ. ಮೋಹಿತ್ ಪಾಂಡೆ ಅವರು ಇತ್ತೀಚೆಗೆ ಅಯೋಧ್ಯೆಯ ಶ್ರೀರಾಮ ಮಂದಿರದ ಮುಖ್ಯ ಅರ್ಚಕರಾಗಿ ಆಯ್ಕೆಯಾಗಿದ್ದರು.

ಕೆಲವು ಸಾಮಾಜಿಕ ಮಾಧ್ಯಮಗಳು  ಮೋಹಿತ್ ಪಾಂಡೆ ಅವರ ಹೆಸರಿನಲ್ಲಿ ನಕಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿವೆ. ಇದೇ ರೀತಿ  ಕಾಂಗ್ರೆಸ್ ನಾಯಕ ಹಿತೇಂದ್ರ ಪಿತಾಡಿಯಾ ಕೂಡ ಮೋಹಿತ್ ಪಾಂಡೆಯ ಎಂದು ಹೇಳುವ ಮೂಲಕ ಫೋಟೋಗಳು ಮತ್ತು ವೀಡಿಯೊಗಳನ್ನು ವಿಡಿಯೋ ಶೇರ್‌ ಮಾಡಿದ್ದರು. ಅರ್ಚಕರ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹಿತೇಂದ್ರ ಪಿತಾಡಿಯಾ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಹಿಂದೂಗಳ ಸುಮಾರು 200 ವರ್ಷಗಳ ಕನಸು ನನಸಾಗೋ ಕಾಲ ಹತ್ತಿರವಾಗುತ್ತಿದ್ದಂತೆಯೇ ಕಿಡಿಗೇಡಿಗಳು ಈಗ ಅರ್ಚಕರ ಬಗ್ಗೆಯೂ ಅಪಪ್ರಚಾರ ಆರಂಭಿಸಿದ್ದಾರೆ. ಹೀಗಾಗಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಅಯೋಧ್ಯೆ ರಾಮಮಂದಿರ ಅರ್ಚಕರಾಗಿ ನೇಮಕಗೊಂಡಿರುವ ಮೋಹಿತ್ ಪಾಂಡೆ ವಿರುದ್ಧ ನಕಲಿ ವಿಡಿಯೋ, ಫೋಟೋ ಹರಿಬಿಡಲಾಗಿದೆ. ಅರ್ಚಕ ಮೋಹಿತ್ ಪಾಂಡೆ ಮಹಿಳೆಯೊಬ್ಬರ ಜೊತೆ ಅಶ್ಲೀಲ ಭಂಗಿಯಲ್ಲಿದ್ದು, ಚುಂಬಿಸುತ್ತಿರುವಂತೆ ನಕಲಿ ವಿಡಿಯೋ ತಯಾರಿಸಲಾಗಿದೆ. ಇದು ಫೇಕ್ ವಿಡಿಯೋ ಎನ್ನುವುದು ದೃಢಪಟ್ಟಿದೆ.

Source :Organiser

Ayodhya: Congress leader held for sharing morphed pictures of porn star, claiming to be Ram Mandir pujari Mohit Pandey

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

4 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

4 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

4 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

11 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

12 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

12 hours ago