#RainWater | ಕುಸಿಯುತ್ತಿದೆ ಕೆ ಆರ್‌ ಎಸ್ ನೀರಿನ ಮಟ್ಟ | ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ತೀರ್ಮಾನ |

June 22, 2023
1:25 PM

ಮುಂಗಾರು ಮಳೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಮಾತ್ರ ಸುರಿಯುತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ವರುಣ ಕೃಪೆ ತೋರಿಲ್ಲ. ಇದರಿಂದ ರಾಜ್ಯದ  ಜೀವನಾಡಿಗಳಲ್ಲಿ ಒಂದಾದ ಕೆಆರ್​ಎಸ್ ಡ್ಯಾಂ ನಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಬಿಟ್ಟಿರೋದರಿಂದ ನೀರಿನ ಮಟ್ಟ ಒಂದೇ ವಾರದಲ್ಲಿ 78 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿ ಕಟ್ಟೆಯಲ್ಲಿ, ಈಗ 78 ಅಡಿ ಮಾತ್ರ ನೀರು ಇದೆ. ಕಳೆದ ವಾರ 12 ಟಿಎಂಸಿ ಇದ್ದ ನೀರು ಇಂದು(ಜೂ.22) 10 ಟಿಎಂಸಿಗೆ ಕುಸಿತ ಕಂಡಿದೆ.ಬಳಕೆಗೆ 3 ಟಿಎಂಸಿ ನೀರು ಮಾತ್ರ ಲಭ್ಯ ಇದೆ.

ಇದೀಗ ಉಳಿದಿರುವ 10 ಟಿಎಂಸಿಯಲ್ಲಿ 7 ಟಿಎಂಸಿ ಡೆಡ್ ಸ್ಟೋರೇಜ್, ಇದೀಗ ಬಳಕೆಗೆ ಲಭ್ಯ ಇರುವುದು ಕೇವಲ 3 ಟಿಎಂಸಿ ನೀರು ಮಾತ್ರ. ಇದರಿಂದ ಕೆಲವೇ ದಿನಗಳಲ್ಲಿ ರಾಜಧಾನಿ ಬೆಂಗಳೂರಿಗರಿಗೆ ಜಲ ಕ್ಷಾಮ ಎದುರಾಗುವ ಭೀತಿ ಎದುರಾಗಿದ್ದು, ಮಳೆ ಬೀಳದಿದ್ದರೆ ಬೆಂಗಳೂರಿಗರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದರಲ್ಲಿ ಸಂದೇಹವಿಲ್ಲ. ಈ ಕಾರಣ ಉಳಿದಿರುವ ನೀರನ್ನ ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಿಂತನೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ನಾಲೆಗಳಿಗೆ ನೀರು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror