ಮುಂಗಾರು ಮಳೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಮಾತ್ರ ಸುರಿಯುತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ವರುಣ ಕೃಪೆ ತೋರಿಲ್ಲ. ಇದರಿಂದ ರಾಜ್ಯದ ಜೀವನಾಡಿಗಳಲ್ಲಿ ಒಂದಾದ ಕೆಆರ್ಎಸ್ ಡ್ಯಾಂ ನಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಬಿಟ್ಟಿರೋದರಿಂದ ನೀರಿನ ಮಟ್ಟ ಒಂದೇ ವಾರದಲ್ಲಿ 78 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿ ಕಟ್ಟೆಯಲ್ಲಿ, ಈಗ 78 ಅಡಿ ಮಾತ್ರ ನೀರು ಇದೆ. ಕಳೆದ ವಾರ 12 ಟಿಎಂಸಿ ಇದ್ದ ನೀರು ಇಂದು(ಜೂ.22) 10 ಟಿಎಂಸಿಗೆ ಕುಸಿತ ಕಂಡಿದೆ.ಬಳಕೆಗೆ 3 ಟಿಎಂಸಿ ನೀರು ಮಾತ್ರ ಲಭ್ಯ ಇದೆ.
ಇದೀಗ ಉಳಿದಿರುವ 10 ಟಿಎಂಸಿಯಲ್ಲಿ 7 ಟಿಎಂಸಿ ಡೆಡ್ ಸ್ಟೋರೇಜ್, ಇದೀಗ ಬಳಕೆಗೆ ಲಭ್ಯ ಇರುವುದು ಕೇವಲ 3 ಟಿಎಂಸಿ ನೀರು ಮಾತ್ರ. ಇದರಿಂದ ಕೆಲವೇ ದಿನಗಳಲ್ಲಿ ರಾಜಧಾನಿ ಬೆಂಗಳೂರಿಗರಿಗೆ ಜಲ ಕ್ಷಾಮ ಎದುರಾಗುವ ಭೀತಿ ಎದುರಾಗಿದ್ದು, ಮಳೆ ಬೀಳದಿದ್ದರೆ ಬೆಂಗಳೂರಿಗರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದರಲ್ಲಿ ಸಂದೇಹವಿಲ್ಲ. ಈ ಕಾರಣ ಉಳಿದಿರುವ ನೀರನ್ನ ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಿಂತನೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ನಾಲೆಗಳಿಗೆ ನೀರು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…