ಮುಂಗಾರು ಮಳೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಮಾತ್ರ ಸುರಿಯುತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ವರುಣ ಕೃಪೆ ತೋರಿಲ್ಲ. ಇದರಿಂದ ರಾಜ್ಯದ ಜೀವನಾಡಿಗಳಲ್ಲಿ ಒಂದಾದ ಕೆಆರ್ಎಸ್ ಡ್ಯಾಂ ನಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಬಿಟ್ಟಿರೋದರಿಂದ ನೀರಿನ ಮಟ್ಟ ಒಂದೇ ವಾರದಲ್ಲಿ 78 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿ ಕಟ್ಟೆಯಲ್ಲಿ, ಈಗ 78 ಅಡಿ ಮಾತ್ರ ನೀರು ಇದೆ. ಕಳೆದ ವಾರ 12 ಟಿಎಂಸಿ ಇದ್ದ ನೀರು ಇಂದು(ಜೂ.22) 10 ಟಿಎಂಸಿಗೆ ಕುಸಿತ ಕಂಡಿದೆ.ಬಳಕೆಗೆ 3 ಟಿಎಂಸಿ ನೀರು ಮಾತ್ರ ಲಭ್ಯ ಇದೆ.
ಇದೀಗ ಉಳಿದಿರುವ 10 ಟಿಎಂಸಿಯಲ್ಲಿ 7 ಟಿಎಂಸಿ ಡೆಡ್ ಸ್ಟೋರೇಜ್, ಇದೀಗ ಬಳಕೆಗೆ ಲಭ್ಯ ಇರುವುದು ಕೇವಲ 3 ಟಿಎಂಸಿ ನೀರು ಮಾತ್ರ. ಇದರಿಂದ ಕೆಲವೇ ದಿನಗಳಲ್ಲಿ ರಾಜಧಾನಿ ಬೆಂಗಳೂರಿಗರಿಗೆ ಜಲ ಕ್ಷಾಮ ಎದುರಾಗುವ ಭೀತಿ ಎದುರಾಗಿದ್ದು, ಮಳೆ ಬೀಳದಿದ್ದರೆ ಬೆಂಗಳೂರಿಗರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದರಲ್ಲಿ ಸಂದೇಹವಿಲ್ಲ. ಈ ಕಾರಣ ಉಳಿದಿರುವ ನೀರನ್ನ ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಿಂತನೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ನಾಲೆಗಳಿಗೆ ನೀರು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…