Advertisement
ಪ್ರಮುಖ

ತಮಿಳುನಾಡು ಅಡಿಕೆ | ಬೆಲೆ ಕುಸಿತದಿಂದ ತಮಿಳುನಾಡು ಅಡಿಕೆ ಬೆಳೆಗಾರರಿಗೆ ಸಮಸ್ಯೆ | ನೇರ ಖರೀದಿ ಕೇಂದ್ರ ತೆರೆಯಲು ಬೆಳೆಗಾರರ ಒತ್ತಾಯ |

Share

ಅಡಿಕೆ ಬೆಳೆ ವಿಸ್ತರಣೆಯ ನಂತರ ಇದೀಗ ತಮಿಳುನಾಡಿನಲ್ಲಿ ಅಡಿಕೆ ಬೆಲೆಯ ಸಮಸ್ಯೆ ಶುರುವಾಗಿದೆ. ಸದ್ಯ ಹಸಿ ಅಡಿಕೆ ಕೆಜಿಗೆ 42 – 47 ರೂ.ಗಳಿಗೆ ಮತ್ತು ಒಣ ಅಡಿಕೆ(ಸೀಳಿದ ಅಡಿಕೆ) ಕೆಜಿಗೆ 52 – 57 ರೂ.ಗಳಿಗೆ ಮಾರಾಟವಾಗುತ್ತಿದೆ. ಹೀಗಾಗಿ ಅಡಿಕೆ ಬೆಳೆಗಾರರು ಸಂಕಷ್ಟವನ್ನು ಅನುಭವಿಸುತ್ತಿದ್ದು, ಕೊಯಮತ್ತೂರು ಜಿಲ್ಲೆಯಲ್ಲಿ ಅಡಿಕೆ ನೇರ ಖರೀದಿ ಕೇಂದ್ರವನ್ನು ತೆರೆಯಬೇಕೆಂದು ಬೆಳೆಗಾರರು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.……… ಮುಂದೆ ಓದಿ…….

Advertisement

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಯನ್ನು ಈಗ ಬೆಳೆಯಲಾಗುತ್ತಿದೆ. ಕೆಲವು ಸಮಯಗಳಿಂದ ಬೆಳೆ ವಿಸ್ತರಣೆ ವ್ಯಾಪಕವಾಗಿತ್ತು.  ತಮಿಳುನಾಡಿನ ಮೆಟ್ಟುಪಾಳಯಂ, ಅಣ್ಣೂರು, ಪೆರೂರ್ ಮತ್ತು ಪೊಲ್ಲಾಚಿ ಪ್ರದೇಶಗಳಲ್ಲಿ 15,000 ಎಕರೆಗಳಿಗೂ ಹೆಚ್ಚು ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಅಲ್ಲಿ ಒಬ್ಬ ರೈತ ಅಡಿಕೆ ತೋಟಕ್ಕೆ ಎಕರೆಗೆ 4.5 ಲಕ್ಷ ರೂ.ಗಳವರೆಗೆ ಖರ್ಚು ಮಾಡುತ್ತಾನೆ. ಹೀಗೆ ನಾಟಿ ಮಾಡಿದ ತೋಟಗಳಲ್ಲಿ ಈಗ ಫಸಲು ಆರಂಭವಾಗಿದೆ. ಮೋಹಿತ್ ನಗರ್ ಮತ್ತು ಸುಮಂಗಳ ತಳಿಯನ್ನು ಹೆಚ್ಚಾಗಿ ಬೆಳೆಯಲಾಗಿದೆ. ಸದ್ಯ ಪ್ರತೀ ಮರಕ್ಕೆ 5 ಕೆಜಿ ಅಡಿಕೆ ಬೆಳೆಯಲಾಗುತ್ತಿದೆ ಎಂದು ರೈತರು ಹೇಳುತ್ತಾರೆ. ಪ್ರಸ್ತುತ, ಹಸಿ ಅಡಿಕೆ ಕೆಜಿಗೆ 42 – 47 ರೂ.ಗಳಿಗೆ ಮತ್ತು ಸೀಳಿದ ಅಡಿಕೆ ಕೆಜಿಗೆ 52 – 57 ರೂ.ಗಳಿಗೆ ಮಾರಾಟವಾಗುತ್ತಿದೆ. ಕರ್ನಾಟಕ ಮತ್ತು ಕೇರಳ ಪ್ರಮುಖ ಮಾರುಕಟ್ಟೆಗಳಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ, ಅಡಿಕೆ ಕೆಜಿಗೆ 58 ರೂ.ಗೆ ಮಾರಾಟವಾಗಿತ್ತುಎಂದು ಹೇಳುತ್ತಾರೆ ಅಡಿಕೆ ಬೆಳೆಗಾರರು.

ಕಳೆದ 5 ವರ್ಷಗಳಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಉತ್ತಮ ಧಾರಣೆಯೂ ಇತ್ತು. ಈ ಬಾರಿ ಧಾರಣೆ ಕುಸಿತವಾಗಿದೆ. ಮದ್ಯವರ್ತಿಗಳ ಹಸ್ತಕ್ಷೇಪವೇ ಇದಕ್ಕೆ ಕಾರಣ ಎನ್ನುತ್ತಾರೆ ರೈತರು.

 

In Tamil Nadu, arecanut growers are facing significant challenges due to a drastic decline in prices. This downturn has severely impacted their livelihoods, as arecanut cultivation is a crucial source of income for many farmers in the region. These issues have compounded financial pressures on growers, many of whom are already grappling with rising production costs and unfavorable weather conditions. As a result, farmers are calling for government intervention and support to stabilize prices and provide relief to the struggling agricultural community.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

11 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

11 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

19 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

20 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago