ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ. ತಿಮ್ಮಾಪುರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 6 ಮಂದಿಯ ಪೈಕಿ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರಿನಲ್ಲಿ ವಾಸವಿದ್ದ ರಮೇಶ್ ಕುಟುಂಬ 4 ದಿನಗಳ ಹಿಂದೆ ರಾಯಚೂರಿನ ಸ್ವಗ್ರಾಮಕ್ಕೆ ಮರಳಿತ್ತು. ಸೋಮವಾರ ಮನೆಯ ಯಜಮಾನ ಹೊಲದಲ್ಲಿ ತೊಗರಿಬೆಳೆಗೆ ಕೀಟನಾಶಕ ಸಿಂಪಡಿಸಿದ್ದರು. ರೈತ ಕುಟುಂಬದ ಇವರು ಹತ್ತಿ ಹಾಗೂ ತೊಗರಿ ಬೆಳೆಯುತ್ತಾರೆ. ತೋಟದ ಅಂಚಿನಲ್ಲಿ ತರಕಾರಿ ಕೃಷಿಯನ್ನೂ ಮಾಡುತ್ತಿದ್ದರು. ಸೋಮವಾರ ರಾತ್ರಿ ತಮ್ಮದೇ ಹೊಲದಲ್ಲಿ ಬೆಳೆದಿರುವ ತರಕಾರಿಯನ್ನು ತಂದು ಪಲ್ಯ, ಸಾರು ಮಾಡಿದ್ದರು. ಊಟದ ಬಳಿಕ ರಾತ್ರಿ ಕುಟುಂಬ ಮಲಗಿತ್ತು. ತಡ ರಾತ್ರಿ ಕುಟುಂಬದ ಎಲ್ಲಾ ಸದಸ್ಯರು ಹೊಟ್ಟೆನೋವಿನಿಂದ ಬಳಲಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) , ದೀಪಾ(6) ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

