ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ. ತಿಮ್ಮಾಪುರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 6 ಮಂದಿಯ ಪೈಕಿ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರಿನಲ್ಲಿ ವಾಸವಿದ್ದ ರಮೇಶ್ ಕುಟುಂಬ 4 ದಿನಗಳ ಹಿಂದೆ ರಾಯಚೂರಿನ ಸ್ವಗ್ರಾಮಕ್ಕೆ ಮರಳಿತ್ತು. ಸೋಮವಾರ ಮನೆಯ ಯಜಮಾನ ಹೊಲದಲ್ಲಿ ತೊಗರಿಬೆಳೆಗೆ ಕೀಟನಾಶಕ ಸಿಂಪಡಿಸಿದ್ದರು. ರೈತ ಕುಟುಂಬದ ಇವರು ಹತ್ತಿ ಹಾಗೂ ತೊಗರಿ ಬೆಳೆಯುತ್ತಾರೆ. ತೋಟದ ಅಂಚಿನಲ್ಲಿ ತರಕಾರಿ ಕೃಷಿಯನ್ನೂ ಮಾಡುತ್ತಿದ್ದರು. ಸೋಮವಾರ ರಾತ್ರಿ ತಮ್ಮದೇ ಹೊಲದಲ್ಲಿ ಬೆಳೆದಿರುವ ತರಕಾರಿಯನ್ನು ತಂದು ಪಲ್ಯ, ಸಾರು ಮಾಡಿದ್ದರು. ಊಟದ ಬಳಿಕ ರಾತ್ರಿ ಕುಟುಂಬ ಮಲಗಿತ್ತು. ತಡ ರಾತ್ರಿ ಕುಟುಂಬದ ಎಲ್ಲಾ ಸದಸ್ಯರು ಹೊಟ್ಟೆನೋವಿನಿಂದ ಬಳಲಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) , ದೀಪಾ(6) ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…