ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ. ತಿಮ್ಮಾಪುರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 6 ಮಂದಿಯ ಪೈಕಿ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರಿನಲ್ಲಿ ವಾಸವಿದ್ದ ರಮೇಶ್ ಕುಟುಂಬ 4 ದಿನಗಳ ಹಿಂದೆ ರಾಯಚೂರಿನ ಸ್ವಗ್ರಾಮಕ್ಕೆ ಮರಳಿತ್ತು. ಸೋಮವಾರ ಮನೆಯ ಯಜಮಾನ ಹೊಲದಲ್ಲಿ ತೊಗರಿಬೆಳೆಗೆ ಕೀಟನಾಶಕ ಸಿಂಪಡಿಸಿದ್ದರು. ರೈತ ಕುಟುಂಬದ ಇವರು ಹತ್ತಿ ಹಾಗೂ ತೊಗರಿ ಬೆಳೆಯುತ್ತಾರೆ. ತೋಟದ ಅಂಚಿನಲ್ಲಿ ತರಕಾರಿ ಕೃಷಿಯನ್ನೂ ಮಾಡುತ್ತಿದ್ದರು. ಸೋಮವಾರ ರಾತ್ರಿ ತಮ್ಮದೇ ಹೊಲದಲ್ಲಿ ಬೆಳೆದಿರುವ ತರಕಾರಿಯನ್ನು ತಂದು ಪಲ್ಯ, ಸಾರು ಮಾಡಿದ್ದರು. ಊಟದ ಬಳಿಕ ರಾತ್ರಿ ಕುಟುಂಬ ಮಲಗಿತ್ತು. ತಡ ರಾತ್ರಿ ಕುಟುಂಬದ ಎಲ್ಲಾ ಸದಸ್ಯರು ಹೊಟ್ಟೆನೋವಿನಿಂದ ಬಳಲಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) , ದೀಪಾ(6) ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…