Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

Advertisement

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

4 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

6 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

16 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

16 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

16 hours ago