ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

Advertisement

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

23 minutes ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

5 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

5 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

17 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

17 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

1 day ago