Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

7 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

11 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 days ago