Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

7 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

7 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

7 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago