Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

14 minutes ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

11 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

20 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago