Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago