Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

7 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

17 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

23 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago