Advertisement
ಸುದ್ದಿಗಳು

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

Share

ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

Advertisement
Advertisement

ದೇಶಕ್ಕೆ ಅತ್ಯಗತ್ಯವಾಗಿದ್ದ ಬೇಲ್ಔಟ್ ಸಿಗುವುದಕ್ಕೆ ಐಎಂಎಫ್ ನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

Advertisement

ತಿಂಗಳಿನಿಂದ ತಿಂಗಳಿಗೆ ಲೆಕ್ಕ ಹಾಕಲಾಗುವ ಹಣದುಬ್ಬರ ಶೇ.3.72 ರಷ್ಟಿದ್ದು, ಆದರೆ ಕಳೆದ ವರ್ಷದ ಸರಾಸರಿ ಹಣದುಬ್ಬರ ದರ ಶೇ. 27.26 ರಷ್ಟಿತ್ತು.

ಈಗಿರುವ ಸಾಲವನ್ನು ತೀರಿಸುವುದಕ್ಕೆ ಪಾಕ್ ಗೆ ಶತಕೋಟಿ ಡಾಲರ್ ಹಣಕಾಸು ಅಗತ್ಯವಿದೆ, ಆದರೆ ವಿದೇಶಿ ವಿನಿಮಯ ಮೀಸಲು ಕಡಿಮೆಯಾಗಿದೆ ಮತ್ತು ಅಲ್ಲಿನ ರೂಪಾಯಿ ಮೌಲ್ಯ ಕುಸಿಯುತ್ತಿದೆ.

Advertisement

ಬಡ ಪಾಕಿಸ್ತಾನಿಗಳು ಆರ್ಥಿಕ ಪ್ರಕ್ಷುಬ್ಧತೆಯ ತೀವ್ರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಮುಸ್ಲಿಂ ಉಪವಾಸದ ತಿಂಗಳ ರಂಜಾನ್ ಪ್ರಾರಂಭವಾದಾಗಿನಿಂದ ಆಹಾರ ವಿತರಣಾ ಕೇಂದ್ರಗಳಲ್ಲಿ ಗುಂಪು ಘರ್ಷಣೆಗಳಲ್ಲಿ, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

Advertisement

“ಹಣದುಬ್ಬರವು ಏರುತ್ತಿರುವ ರೀತಿಯಲ್ಲಿ, ಕ್ಷಾಮದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕರಾಚಿ ಮೂಲದ ವಿಶ್ಲೇಷಕ ಶಾಹಿದಾ ವಿಜಾರತ್ ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯ ಕಾರ್ಖಾನೆಯೊಂದರಲ್ಲಿ  ರಂಜಾನ್ ವೇಳೆ ನಡೆಯುವ ದಾನ ವಿತರಣೆ ಕಾರ್ಯಕ್ರಮದಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ

Advertisement
ಜಾಗತಿಕ ಇಂಧನ ಬಿಕ್ಕಟ್ಟು ಮತ್ತು 2022 ರಲ್ಲಿ ದೇಶದ ಮೂರನೇ ಒಂದು ಭಾಗವನ್ನು ಮುಳುಗಿಸಿದ ವಿನಾಶಕಾರಿ ಪ್ರವಾಹ. ವರ್ಷಗಳ ಆರ್ಥಿಕ ದುರುಪಯೋಗ ಮತ್ತು ರಾಜಕೀಯ ಅಸ್ಥಿರತೆಯ ಪರಿಣಾಮಗಳಿಂದಾಗಿ ಪಾಕಿಸ್ತಾನದ ಆರ್ಥಿಕತೆ ಕುಸಿತದ ಅಂಚಿಗೆ ತಲುಪಿದೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

8 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

17 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago