ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ | ನೆಹರೂ ಸ್ಮರಿಸಿದ ಪ್ರಧಾನಿ ಮೋದಿ | ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ |

September 19, 2023
11:15 AM
ಹಳೆಯ ಸಂಸತ್‌ ಭವನದಿಂದ ಹೊಸ ಸಂಸತ್ತಿಗೆ ತೆರಳುತ್ತಿರುವುದು ಕಷ್ಟವಾಗುತ್ತಿದೆ. ಯಾವುದೇ ಕುಟುಂಬವು ಒಂದು ಮನೆಯನ್ನು ಬಿಟ್ಟು ಹೋಗುವುದು ಎಷ್ಟು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುತ್ತದೆಯೋ, ಅಷ್ಟೇ ಭಾವನಾತ್ಮಕ ಕ್ಷಣಗಳಿಗೆ ಹಳೆಯ ಸಂಸತ್‌ ಭವನವು ದೂಡಿದೆ. ಆದರೆ, ಈ ಸಂಸತ್‌ ಭವನದ ನೆನಪುಗಳು ಎಂದಿಗೂ ನಮ್ಮ ಸ್ಮೃತಿಪಟಲದಲ್ಲಿ ಇರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು.

ಹಳೆಯ ಸಂಸತ್‌ ಭವನ ದೇಶದ ಏಳಿಗೆಯ, ಅಭಿವೃದ್ಧಿಯ ಹಾಗೂ ಪ್ರಜಾಪ್ರಭುತ್ವ ಸಂಕೇತವಾಗಿದೆ. ಸಂಸತ್‌ ಭವನವನ್ನು ಬ್ರಿಟಿಷರು ನಿರ್ಮಿಸಿದರೂ, ಇದರ ನಿರ್ಮಾಣಕ್ಕೆ ಭಾರತೀಯರ ಬೆವರು ಹರಿದಿದೆ, ಭಾರತೀಯರ ಹಣ ಖರ್ಚಾಗಿದೆ. ನಾವು ಹೊಸ ಸಂಸತ್‌ ಭವನ ಪ್ರವೇಶಿಸುತ್ತಿದ್ದರೂ, ಮುಂಬರುವ ಪೀಳಿಗೆಗೆ ಹಳೆಯ ಸಂಸತ್‌ ಭವನದ ಇತಿಹಾಸ, ಶ್ರೇಷ್ಠತೆ, ಕೊಡುಗೆಯನ್ನು ನೀಡಿದೆ. ಹಳೇ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದಾರೆ.

Advertisement
Advertisement

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ  ಅವರ ಐತಿಹಾಸಿಕ ‘ಎ ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ. “ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ” ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

Advertisement

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ, “ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂದು ಹೇಳಿದ್ದರು. ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

Advertisement

(News Agencies)

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ
May 15, 2024
11:31 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ
May 15, 2024
11:09 PM
by: The Rural Mirror ಸುದ್ದಿಜಾಲ
ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ
May 15, 2024
10:50 PM
by: The Rural Mirror ಸುದ್ದಿಜಾಲ
ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ
May 15, 2024
10:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror