Advertisement
ಪ್ರಮುಖ

ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ | ನೆಹರೂ ಸ್ಮರಿಸಿದ ಪ್ರಧಾನಿ ಮೋದಿ | ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ |

Share

ಹಳೆಯ ಸಂಸತ್‌ ಭವನ ದೇಶದ ಏಳಿಗೆಯ, ಅಭಿವೃದ್ಧಿಯ ಹಾಗೂ ಪ್ರಜಾಪ್ರಭುತ್ವ ಸಂಕೇತವಾಗಿದೆ. ಸಂಸತ್‌ ಭವನವನ್ನು ಬ್ರಿಟಿಷರು ನಿರ್ಮಿಸಿದರೂ, ಇದರ ನಿರ್ಮಾಣಕ್ಕೆ ಭಾರತೀಯರ ಬೆವರು ಹರಿದಿದೆ, ಭಾರತೀಯರ ಹಣ ಖರ್ಚಾಗಿದೆ. ನಾವು ಹೊಸ ಸಂಸತ್‌ ಭವನ ಪ್ರವೇಶಿಸುತ್ತಿದ್ದರೂ, ಮುಂಬರುವ ಪೀಳಿಗೆಗೆ ಹಳೆಯ ಸಂಸತ್‌ ಭವನದ ಇತಿಹಾಸ, ಶ್ರೇಷ್ಠತೆ, ಕೊಡುಗೆಯನ್ನು ನೀಡಿದೆ. ಹಳೇ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದಾರೆ.

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ  ಅವರ ಐತಿಹಾಸಿಕ ‘ಎ ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ. “ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ” ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ, “ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂದು ಹೇಳಿದ್ದರು. ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

(News Agencies)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

3 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

6 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

10 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago