Advertisement
ಪ್ರಮುಖ

ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ | ನೆಹರೂ ಸ್ಮರಿಸಿದ ಪ್ರಧಾನಿ ಮೋದಿ | ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ |

Share

ಹಳೆಯ ಸಂಸತ್‌ ಭವನ ದೇಶದ ಏಳಿಗೆಯ, ಅಭಿವೃದ್ಧಿಯ ಹಾಗೂ ಪ್ರಜಾಪ್ರಭುತ್ವ ಸಂಕೇತವಾಗಿದೆ. ಸಂಸತ್‌ ಭವನವನ್ನು ಬ್ರಿಟಿಷರು ನಿರ್ಮಿಸಿದರೂ, ಇದರ ನಿರ್ಮಾಣಕ್ಕೆ ಭಾರತೀಯರ ಬೆವರು ಹರಿದಿದೆ, ಭಾರತೀಯರ ಹಣ ಖರ್ಚಾಗಿದೆ. ನಾವು ಹೊಸ ಸಂಸತ್‌ ಭವನ ಪ್ರವೇಶಿಸುತ್ತಿದ್ದರೂ, ಮುಂಬರುವ ಪೀಳಿಗೆಗೆ ಹಳೆಯ ಸಂಸತ್‌ ಭವನದ ಇತಿಹಾಸ, ಶ್ರೇಷ್ಠತೆ, ಕೊಡುಗೆಯನ್ನು ನೀಡಿದೆ. ಹಳೇ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದಾರೆ.

Advertisement
Advertisement

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ  ಅವರ ಐತಿಹಾಸಿಕ ‘ಎ ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ. “ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ” ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

Advertisement

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ, “ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂದು ಹೇಳಿದ್ದರು. ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

Advertisement

(News Agencies)

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

3 mins ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

25 mins ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

44 mins ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

58 mins ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

4 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

9 hours ago