Advertisement
ಪ್ರಮುಖ

ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ | ನೆಹರೂ ಸ್ಮರಿಸಿದ ಪ್ರಧಾನಿ ಮೋದಿ | ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ |

Share

ಹಳೆಯ ಸಂಸತ್‌ ಭವನ ದೇಶದ ಏಳಿಗೆಯ, ಅಭಿವೃದ್ಧಿಯ ಹಾಗೂ ಪ್ರಜಾಪ್ರಭುತ್ವ ಸಂಕೇತವಾಗಿದೆ. ಸಂಸತ್‌ ಭವನವನ್ನು ಬ್ರಿಟಿಷರು ನಿರ್ಮಿಸಿದರೂ, ಇದರ ನಿರ್ಮಾಣಕ್ಕೆ ಭಾರತೀಯರ ಬೆವರು ಹರಿದಿದೆ, ಭಾರತೀಯರ ಹಣ ಖರ್ಚಾಗಿದೆ. ನಾವು ಹೊಸ ಸಂಸತ್‌ ಭವನ ಪ್ರವೇಶಿಸುತ್ತಿದ್ದರೂ, ಮುಂಬರುವ ಪೀಳಿಗೆಗೆ ಹಳೆಯ ಸಂಸತ್‌ ಭವನದ ಇತಿಹಾಸ, ಶ್ರೇಷ್ಠತೆ, ಕೊಡುಗೆಯನ್ನು ನೀಡಿದೆ. ಹಳೇ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದಾರೆ.

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ  ಅವರ ಐತಿಹಾಸಿಕ ‘ಎ ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ. “ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ” ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ, “ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂದು ಹೇಳಿದ್ದರು. ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

(News Agencies)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

4 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

6 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

12 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

18 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago