ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

June 5, 2026
7:04 AM
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು ಸೂಚನಾ ಫಲಕ ಅಳವಡಿಸುವಂತೆ ಬೆಂಗಳೂರು ಗ್ರಾಮಾಂತರ ಕೃಷಿ ಇಲಾಖೆ ರೈತರಿಗೆ ಮನವಿ ಮಾಡಿದೆ. ಇದು ಆಕಸ್ಮಿಕ ಸಾವುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಆಕಸ್ಮಿಕ ಸಾವುಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ರೈತರು ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಿ, ಎಚ್ಚರಿಕೆ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು ಎಂದು ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕಿ ಕಲಾವತಿ ಬಿ.ಜಿ. ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ, ಕ್ಷೇತ್ರ ಬದು, ಪಾಲಿಥಿನ್ ಹೊದಿಕೆ, ತಂತಿ ಬೇಲಿ, ಪಂಪ್‌ಸೆಟ್ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳನ್ನು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಿಂದ ಮಳೆನೀರಿನ ಸಂಗ್ರಹಣೆ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿದೆ.

ಆದರೆ, ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹವಾಗಿರುವ ಸಂದರ್ಭಗಳಲ್ಲಿ ಮಕ್ಕಳು, ಸಾರ್ವಜನಿಕರು ಅಥವಾ ಜಾನುವಾರುಗಳು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.

ಹೀಗಾಗಿ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಸುವುದರ ಜೊತೆಗೆ, ಅಪಾಯದ ಬಗ್ಗೆ ಎಚ್ಚರಿಕೆ ನೀಡುವ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ರೈತರಿಗೆ ಸಲಹೆ ನೀಡಲಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳು ಸಹ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.

The Agriculture Department has urged farmers in Bengaluru Rural district to install fencing and warning boards around farm ponds created under the Krishi Bhagya Scheme. The move aims to prevent accidental deaths and ensure public safety around water-filled farm ponds.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror