ರೈತರ ಮಕ್ಕಳಿಗೆ ಸರ್ಕಾರದಿಂದ ಶಿಷ್ಯವೇತನ ಜಾರಿ |

January 13, 2022
2:11 PM

ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಕೆಗಳನ್ನು ಹೊರಡಿಸಿದ್ದರು.

ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿನಿಯರಿಗೆ ರೂ 3,000 ಸ್ಕಾಲರ್ ಶಿಪ್ ನೀಡಲಾಗುವುದು. ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರೂ 5,000. ವಿದ್ಯಾರ್ಥಿನಿಯರಿಗೆ ರೂ. 5,500 ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್‌ ಗಳಿಗೆ ವಿದ್ಯಾರ್ಥಿಗಳಿಗೆ ರೂ. 7,500, ವಿದ್ಯಾರ್ಥಿನಿಯರಿಗೆ ರೂ. 8,000 ಶಿಷ್ಯ ವೇತನ ದೊರೆಯಲಿದೆ. ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ 11,000 ಸಿಗಲಿದೆ.

ಈ ಶಿಷ್ಯವೇತನವನ್ನು ಪಡೆಯುವವರು ಕರ್ನಾಟಕ ರಾಜ್ಯದವರು ಮಾತ್ರ ಅರ್ಹರಾಗುತ್ತಾರೆ. ರೈತ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನನ ಒಡೆಯರಾಗಿರಬೇಕು ,  ಮಾತ್ರವಲ್ಲದೆ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror