ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಕೆಗಳನ್ನು ಹೊರಡಿಸಿದ್ದರು.
ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿನಿಯರಿಗೆ ರೂ 3,000 ಸ್ಕಾಲರ್ ಶಿಪ್ ನೀಡಲಾಗುವುದು. ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರೂ 5,000. ವಿದ್ಯಾರ್ಥಿನಿಯರಿಗೆ ರೂ. 5,500 ಎಲ್ಎಲ್ಬಿ, ಪ್ಯಾರಾ ಮೆಡಿಕಲ್, ಬಿ ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳಿಗೆ ವಿದ್ಯಾರ್ಥಿಗಳಿಗೆ ರೂ. 7,500, ವಿದ್ಯಾರ್ಥಿನಿಯರಿಗೆ ರೂ. 8,000 ಶಿಷ್ಯ ವೇತನ ದೊರೆಯಲಿದೆ. ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ 11,000 ಸಿಗಲಿದೆ.
ಈ ಶಿಷ್ಯವೇತನವನ್ನು ಪಡೆಯುವವರು ಕರ್ನಾಟಕ ರಾಜ್ಯದವರು ಮಾತ್ರ ಅರ್ಹರಾಗುತ್ತಾರೆ. ರೈತ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನನ ಒಡೆಯರಾಗಿರಬೇಕು , ಮಾತ್ರವಲ್ಲದೆ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…