ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಕೆಗಳನ್ನು ಹೊರಡಿಸಿದ್ದರು.
ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿನಿಯರಿಗೆ ರೂ 3,000 ಸ್ಕಾಲರ್ ಶಿಪ್ ನೀಡಲಾಗುವುದು. ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರೂ 5,000. ವಿದ್ಯಾರ್ಥಿನಿಯರಿಗೆ ರೂ. 5,500 ಎಲ್ಎಲ್ಬಿ, ಪ್ಯಾರಾ ಮೆಡಿಕಲ್, ಬಿ ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳಿಗೆ ವಿದ್ಯಾರ್ಥಿಗಳಿಗೆ ರೂ. 7,500, ವಿದ್ಯಾರ್ಥಿನಿಯರಿಗೆ ರೂ. 8,000 ಶಿಷ್ಯ ವೇತನ ದೊರೆಯಲಿದೆ. ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ 11,000 ಸಿಗಲಿದೆ.
ಈ ಶಿಷ್ಯವೇತನವನ್ನು ಪಡೆಯುವವರು ಕರ್ನಾಟಕ ರಾಜ್ಯದವರು ಮಾತ್ರ ಅರ್ಹರಾಗುತ್ತಾರೆ. ರೈತ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನನ ಒಡೆಯರಾಗಿರಬೇಕು , ಮಾತ್ರವಲ್ಲದೆ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…