ಕೃಷಿಕನಾದವನಿಗೆ ನಷ್ಟವಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಪ್ರತಿಯೊಂದು ಹಣ್ಣಿಗೂ ಅದರದೇ ಆದ ಸೀಸನ್ ಇರುತ್ತದೆ. ಮಾವಿನ ಹಣ್ಣು, ಅನಾನಸ್, ದ್ರಾಕ್ಷಿ, ಹೀಗೆ ಪ್ರತಿಯೊಂದು ಹಣ್ಣಿಗೂ ಒಂದು ಕಾಲದಲ್ಲಿ ತುಂಬ ಬೇಡಿಕೆ ಇದ್ದರೂ, ವರ್ಷ ಪೂರ್ತಿ ಬೇಡಿಕೆ ಇರಲು ಸಾಧ್ಯವಿಲ್ಲ.
ಆದರೆ, ನೆಲ್ಲಿಕಾಯಿಗೆ ವರ್ಷಪೂರ್ತಿ ಮಾರುಕಟ್ಟೆಯಲ್ಲು ಬೇಡಿಕೆ ಸೀರವಾಗಿರುತ್ತದೆ. ನೆಲ್ಲಿಕಾಯಿಂದ ಜ್ಯೂಸ್, ಜಾಮ್, ಕ್ಯಾಂಡಿ,ಪೌಡರ್ ಮೊದಲಾದ ಮೌಲ್ಯವರ್ದಿತ ಉತ್ಪನ್ನಗಳನ್ನು ತಯಾರಿಸಬಹುದು. ಇದರಿಂದ ರೈತರಿಗೆ ಹೆಚ್ಚುವರಿ ಲಾಭ ಸಹ ದೊರೆಯಲು ಸಹಾಯಕಾರಿಯಾಗುತ್ತದೆ. ಈ ನೆಲ್ಲಿಕಾಯಿ ಗಿಡವನ್ನು ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ನೆಲ್ಲಿಕಾಯಿ ಕೃಷಿ ನಡೆಸುತ್ತಿದ್ದಾರೆ. ಈ ಬೆಳೆ ಇತ್ತೀಚಿನ ದಿನಗಳಲ್ಲಿ ಅತ್ಯಂತ ಲಾಭದಾಯಕ ಬೆಳೆಯಾಗಿ ಹೊರಹೊಮ್ಮಿದೆ. ಇಲ್ಲಿನ ಫಲವತ್ತಾದ ಮಣ್ಣು ಮತ್ತು ಹವಾಮಾನವು ಈ ಕೃಷಿಗೆ ಸೂಕ್ತವಾಗಿರುವುದರಿಂದ ರೈತರು ಸಾಂಪ್ರದಾಯಿಕ ಬೆಳೆಗಳಿಂದ ದೂರಾಗಿ ನೆಲ್ಲಿಕಾಯಿ ತೋಟಗಳನ್ನು ಸ್ಥಾಪಿಸಿದ್ದಾರೆ.
ಇಲ್ಲಿ ಹನಿ ನೀರಾವರಿ, ಆಧುನಿಕ ತಂತ್ರಜ್ಞಾನ ಮತ್ತು ಸರ್ಕಾರಿ ಯೋಜನೆಗಳ ಸಹಾಯದಿಂದ ಪುಷ್ಕರ್ ನ ರೈತರು ನೆಲ್ಲಿಕಾಯಿ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಈ ಕೃಷಿಯು ಅಲ್ಪ ಶ್ರಮ, ದೀರ್ಘಾವಧಿಯ ಫಲ ಮತ್ತು ನಿತ್ಯ ಬೇಡಿಕೆಗಳ ಕಾರಣದಿಂದ ಇಂದು ಅನೇಕ ರೈತರ ಆದಾಯದ ನಂಬಿಕೆಯಾಗಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…