ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…