ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…