Advertisement
ಪ್ರಮುಖ

ಬರಗಾಲಕ್ಕೆ ರೈತ ಸಹೋದರರ ಸವಾಲ್ | ಸಾವಯವ ಕೃಷಿ ಮೂಲಕ 4 ಎಕರೆಯಲ್ಲಿ 40 ಕ್ವಿಂಟಾಲ್ ಬೆಳ್ಳುಳ್ಳಿ

Share

‌ಅನ್ನದಾತ(Farmer) ಸದಾ ಕಷ್ಟದಲ್ಲೇ ಜೀವನ ನಡೆಸುವವನು. ಪ್ರಕೃತಿಯ ಆಟಕ್ಕೆ ತಕ್ಕಂತೆ ರೈತ ತನ್ನ ಜೀವನವನ್ನು ರೂಪಿಸಿಕೊಳ್ಳಬೇಕು. ಅದರಲ್ಲೂ ಈ ಬಾರಿ ಮುಂಗಾರು(Mansoon Rain) ಕೈಕೊಟ್ಟ ಕಾರಣ ಮಳೆಯನ್ನೇ ನಂಬಿ ಬೆಳೆ ಬೆಳೆಯುವ ರೈತನಿಗೆ ಬಹಳ ತ್ರಾಸದಾಯಕವಾಗಿದೆ. ಮಳೆ ನಂಬಿ ಬಿತ್ತನೆ ಮಾಡಿದ ಬೀಜವೆಲ್ಲಾ(Seed) ಒಣಗಿ ಹೋಗಿದೆ. ಮಳೆ ಇಲ್ಲ, ಅಂತರ್ಜಲ(ground water) ಮಟ್ಟ ಕುಸಿತ. ಅತ್ತ ಚೂರು ಪಾರು ನೀರಿದ್ದರು ವಿದ್ಯುತ್‌ ಕಣ್ಣ ಮುಚ್ಚಾಲೆ ಆಟ. ಇದು ಸಾಲದು ಎಂಬುದಕ್ಕೆ ಕಷ್ಟಪಟ್ಟು ಬೆಳೆದ ಬೆಳೆಗೆ ಕೊನೆಗೆ ಬೆಲೆ ಇಲ್ಲ.  ಇಚ್ಟೆಲ್ಲಾ ಸಂಕಷ್ಟದ ಮಧ್ಯೆಯೂ ಇಲ್ಲೊಬ್ಬ ರೈತ ಸಹೋದರರು ಸಾವಯವ ಕೃಷಿ(Organic Farming) ಮೂಲಕ ಬಂಪರ್‌ ಬೆಳ್ಳುಳ್ಳಿ ಬೆಳೆ(Garlic crop) ಬೆಳೆದಿದ್ದಾರೆ.

 ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದ ಲಕ್ಷೆಟ್ಟಿ ಸಹೋದರರು ನಾಲ್ಕು ಎಕರೆ ಜಮೀನಿನಲ್ಲಿ ಬೆಳ್ಳುಳ್ಳಿ ಬೆಳೆದು ಸುಮಾರು 40 ಕ್ವಿಂಟಾಲ್​ ಫಸಲು ಪಡೆದಿದ್ದಾರೆ. ಇವರ ಈ ಯಶೋಗಾಥೆಗೆ ಜೈವಿಕ ಗೊಬ್ಬರ ಹಾಗೂ ಅಂತರ್ಜಲಮಟ್ಟ ಕಾಪಾಡಿಕೊಂಡಿರುವುದು ಹಾಗೂ ಇಷ್ಟೆಲ್ಲ ಕಷ್ಟಪಟ್ಟು ಬೆಳೆದ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿರುವುದು ಕಾರಣವಾಗಿದೆ.

ಶ್ರಮಕ್ಕೆ ತಕ್ಕ ಪ್ರತಿಫಲ : ಬೆಳ್ಳುಳ್ಳಿ ಬೆಳೆಗೆ ಈ ವರ್ಷ ಕ್ವಿಂಟಾಲ್‌ಗೆ 25 ಸಾವಿರ ರೂಪಾಯಿವರೆಗೆ ಬೆಲೆ ಸಿಕ್ಕಿರುವುದು ಈ ರೈತರು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಂತಾಗಿದೆ. ಗ್ರಾಮದ ಸಹೋದರರಾದ ಶರಣಪ್ಪ ಮತ್ತು ಕರೇಗೌಡ ಕಳೆದ ಹಲವು ವರ್ಷಗಳಿಂದ ಬೆಳ್ಳುಳ್ಳಿ ಬೆಳೆಯುತ್ತಿದ್ದಾರೆ. ಆದರೆ ಈ ವರ್ಷ ವಿಭಿನ್ನವಾದ ಸಮಸ್ಯೆ ಅವರಿಗೆ ಕಾಡಲಾರಂಭಿಸಿತ್ತು.

ಬೆಳ್ಳುಳ್ಳಿ ಬೆಲೆ ಒಂದು ಹಂತಕ್ಕೆ ಬಂದಾಗ ತೇವಾಂಶದ ಕೊರತೆ ಕಾಣಲಾರಂಭಿಸಿತು. ಮತ್ತೊಂದು ಕಡೆ ಕೊಳವೆಬಾವಿ ನೀರು ಸಹ ಕಡಿಮೆಯಾಗಲಾರಂಭಿಸಿತು. ಇದರಿಂದ ತೀವ್ರ ಆತಂಕಕ್ಕೀಡಾದ ಲಕ್ಷೆಟ್ಟಿ ಸಹೋದರರ ಕೈಹಿಡಿದಿದ್ದು ಸಾವಯವ ಕೃಷಿ. ಅವರು ಕಳೆದ ಹಲವು ವರ್ಷಗಳಿಂದ ಜಮೀನಿಗೆ ತಿಪ್ಪೆಗೊಬ್ಬರ, ಕೋಳಿಗೊಬ್ಬರ, ಜಮೀನಿನಲ್ಲಿ ಕುರಿ ನಿಲ್ಲಿಸುವುದು ಸೇರಿದಂತೆ ವಿವಿಧ ಸಾವಯವ ಗೊಬ್ಬರ ಬಳಕೆ ಮಾಡುತ್ತಿದ್ದಾರೆ. ರಾಸಾಯನಿಕ ಗೊಬ್ಬರ ಬಳಸಿದ್ದರೆ ಜಮೀನಿನಲ್ಲಿರುವ ಪೈರು ಒಣಗಿಹೋಗುತ್ತಿತ್ತು. ಬಿಸಿಲು ತೇವಾಂಶಕ್ಕೆ ಸಿಲುಕಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತಿತ್ತು. ಈ ಸಹೋದರರು ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳ್ಳುಳ್ಳಿಯೇ ಬರುತ್ತೋ ಇಲ್ಲವೋ ಎಂದು ಆತಂಕಗೊಂಡಿದ್ದರು.

ಬಂಪರ್​ ಬೆಳೆ: ಈ ಮಧ್ಯೆ ಜಮೀನಿನ ತೇವಾಂಶ ಉಳಿಸಿಕೊಂಡಿದ್ದರಿಂದ ಸಾವಯವ ಗೊಬ್ಬರ ಉತ್ಪನ್ನಗಳು ಇವರ ಕೈಹಿಡಿದವು. ಪರಿಣಾಮ ಪ್ರತಿವರ್ಷ ಎಕರೆಗೆ 6 ಕ್ವಿಂಟಾಲ್ ಇಲ್ಲವೇ 7 ಕ್ವಿಂಟಾಲ್ ಇಳುವರಿ ಪಡೆಯುತ್ತಿದ್ದ ಈ ಸಹೋದರರು, ಪ್ರಸ್ತುತ ವರ್ಷ ಎಕರೆಗೆ 10 ಕ್ವಿಂಟಾಲ್ ಬೆಳ್ಳುಳ್ಳಿ ಬೆಳೆದಿದ್ದಾರೆ. ಒಂದು ಕಡೆ ಬಂಪರ್ ಫಸಲು ಬಂದರೆ, ಇನ್ನೊಂದು ಕಡೆ ಬಂಪರ್ ಬೆಲೆ ಸಹ ಇದೆ. ಅವರು ಬೆಳ್ಳುಳ್ಳಿ ಬೆಳೆಯಲು ಆರಂಭಿಸಿದಾಗಿನಿಂದ ಇಷ್ಟು ದರವನ್ನು ಅವರು ನೋಡಿರಲಿಲ್ಲ. ಅಷ್ಟು ಅಧಿಕ ದರ ಬೆಳ್ಳುಳ್ಳಿಗೆ ಸಿಕ್ಕಿದೆ.

ಎಕರೆಗೆ ತಲಾ 30 ಸಾವಿರ ರೂಪಾಯಿ ಖರ್ಚು ಮಾಡಿದ್ದೇವೆ. ಎಕರೆಗೆ 10 ಕ್ವಿಂಟಾಲ್ ಬೆಳೆ ಬಂದಿದ್ದು, ಇದರಿಂದ ಕನಿಷ್ಠ ಒಂದೂವರೆ ಲಕ್ಷ ರೂಪಾಯಿ ಆದಾಯ ಸಿಕ್ಕಂತಾಗುತ್ತದೆ ಎನ್ನುತ್ತಾರೆ ರೈತ ಕರೇಗೌಡ. ಇದೀಗ ಬೆಳ್ಳುಳ್ಳಿ ಫಸಲು ಬಂದಿದ್ದು, ಅದನ್ನು ಕಿತ್ತು ಜಮೀನಿನಲ್ಲಿ 20 ದಿನ ಒಣಗಿಸಲಾಗುತ್ತದೆ. ನಂತರ ಸಂಸ್ಕರಿಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತದೆ. ಅದರಲ್ಲಿ ಈ ರೈತರು ಬೆಳೆದ ಬೆಳ್ಳುಳ್ಳಿ ಜವಾರಿ ತಳಿಯಾಗಿದ್ದು, ಸಾಕಷ್ಟು ಬೇಡಿಕೆ ಹೊಂದಿದೆ ಎನ್ನುತ್ತಾರೆ ಸಾವಯವ ತಜ್ಞ ಗಂಗಯ್ಯ ಕುಲಕರ್ಣಿ. ಈ ರೈತರ ಯಶೋಗಾಥೆ ಉಳಿದ ರೈತರ ಗಮನ ಸೆಳೆದಿದೆ. ಅಕ್ಕಪಕ್ಕದ ರೈತರು ಸಹ ತಾವು ಸಹ ಸಾವಯವ ಗೊಬ್ಬರ ಬಳಸಿ ಕೃಷಿ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago