ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರು |

January 16, 2022
10:04 PM

ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಯೋಜನೆಯಡಿಯಲ್ಲಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ. ವರೆಗೆ ಅನುದಾನ ಲಭ್ಯವಾಗಲಿದೆ. ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.

ಮಳೆನೀರು ಕೊಯ್ಲು ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು. ಪರ್ಯಾಯ ಬೆಳೆ ವ್ಯವಸ್ಥೆಗಳು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು, ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ. ಆಸ್ತಿ ರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು, ವಿಕಲಚೇತನರು ಮತ್ತು ಮಹಿಳೆಯರಿಗೆ ಭೂಮಿ, ನೀರು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror