Advertisement
ಕೃಷಿ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರು |

Share

ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಯೋಜನೆಯಡಿಯಲ್ಲಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ. ವರೆಗೆ ಅನುದಾನ ಲಭ್ಯವಾಗಲಿದೆ. ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.

ಮಳೆನೀರು ಕೊಯ್ಲು ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು. ಪರ್ಯಾಯ ಬೆಳೆ ವ್ಯವಸ್ಥೆಗಳು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು, ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ. ಆಸ್ತಿ ರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು, ವಿಕಲಚೇತನರು ಮತ್ತು ಮಹಿಳೆಯರಿಗೆ ಭೂಮಿ, ನೀರು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago