(ಸಾಂದರ್ಭಿಕ ಚಿತ್ರ)
ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಯೋಜನೆಯಡಿಯಲ್ಲಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ. ವರೆಗೆ ಅನುದಾನ ಲಭ್ಯವಾಗಲಿದೆ. ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.
ಮಳೆನೀರು ಕೊಯ್ಲು ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು. ಪರ್ಯಾಯ ಬೆಳೆ ವ್ಯವಸ್ಥೆಗಳು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು, ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ. ಆಸ್ತಿ ರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು, ವಿಕಲಚೇತನರು ಮತ್ತು ಮಹಿಳೆಯರಿಗೆ ಭೂಮಿ, ನೀರು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…