Advertisement
ಕೃಷಿ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರು |

Share

ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಯೋಜನೆಯಡಿಯಲ್ಲಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ. ವರೆಗೆ ಅನುದಾನ ಲಭ್ಯವಾಗಲಿದೆ. ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.

ಮಳೆನೀರು ಕೊಯ್ಲು ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು. ಪರ್ಯಾಯ ಬೆಳೆ ವ್ಯವಸ್ಥೆಗಳು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು, ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ. ಆಸ್ತಿ ರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು, ವಿಕಲಚೇತನರು ಮತ್ತು ಮಹಿಳೆಯರಿಗೆ ಭೂಮಿ, ನೀರು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

5 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

11 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

11 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago