Exclusive - Mirror Hunt

ಕಾಡಿನಿಂದ ನಾಡಿಗೆ ಬಂದ ಮಾವು | ನಾಡ ಮಾವು ತಳಿ ಸಂಗ್ರಹ ಮಾಡಿದ ಕೃಷಿಕ | 400 ಕ್ಕೂ ಹೆಚ್ಚು ಮಾವಿನ ತಳಿಯ ಜೀನ್‌ ಬ್ಯಾಂಕ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇದು ಸಣ್ಣ ಕೆಲಸವಲ್ಲ..!. ಇದೊಂದು ಸಾಹಸ…ಏನದು ಕೆಲಸ ?. ಕಾಡು ಮಾವು ತಳಿ ಸಂರಕ್ಷಣೆ. ಈಗ ಅದನ್ನು ನಾಡ ಮಾವು ಆಗಿ ಪರಿವರ್ತಿಸಿಕೊಂಡು ತಳಿ ಸಂರಕ್ಷಣೆಯ ಕೆಲಸ. ಒಂದಲ್ಲ.. ಎರಡಲ್ಲ  400 ಕ್ಕೂ ಹೆಚ್ಚು ಮಾವಿನ ತಳಿಗಳು ಈಗಾಗಲೇ 5 ಎಕರೆ ಜಾಗದಲ್ಲಿ ನೆಲೆಯೂರಿದೆ. ಇನ್ನೂ ಒಂದಷ್ಟು ಗಿಡಗಳು ಬರಲಿದೆ. ಇದೊಂದು ಮಾವಿನ ಜೀನ್‌ ಬ್ಯಾಂಕ್.‌ ಈ ಸಾಹಸ ಮಾಡಿದರು ಕೃಷಿಕ, ಪಶುವೈದ್ಯ ಡಾ.ಮನೋಹರ ಉಪಾಧ್ಯ. 

Advertisement
Advertisement
ನಾಟಿ ಮಾಡಿರುವ ಮಾವಿನ ಗಿಡಗಳು

ಬಂಟ್ವಾಳ ತಾಲೂಕಿನ ಕೋಡಪದವು ಬಳಿಯ ಕುಕ್ಕಿಲದಲ್ಲಿ ಪಶುವೈದ್ಯ ಡಾ.ಮನೋಹರ ಉಪಾಧ್ಯ ಅವರು ಸುಮಾರು 5 ಎಕ್ರೆ ಜಾಗದಲ್ಲಿ ನಾಡ ಮಾವಿನ ತಳಿಯ ಸಂರಕ್ಷಣೆಯ ಕೆಲಸದಲ್ಲಿ ತೊಡಗಿದ್ದಾರೆ. ಕಳೆದ ವರ್ಷ ಸುಮಾರು 400 ಗಿಡಗಳನ್ನು ನಾಟಿ ಮಾಡಿದ್ದಾರೆ. ಮಾವಿನ ಜೀನ್‌ ಬ್ಯಾಂಕ್‌ ಮಾಡುವುದೇ ಇವರ ಉದ್ದೇಶ. ಅಳಿದು ಹೋಗುವ ಕಾಡ ಮಾವು ಬಹಳ ಔಷಧೀಯ ಗುಣಗಳು, ರುಚಿಕರವಾದ ಹಣ್ಣುಗಳು ಸೇರಿದಂತೆ ವಿವಿಧ ಉತ್ಕೃಷ್ಟ ತಳಿಗಳು ಇದೆ.ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಹಾಗೂ ಇತರ ಕಾರಣಗಳಿಂದ ಇಂದು ಅಂತಹ ಮರಗಳು ನಾಶವಾಗುತ್ತಿದೆ. ಹೀಗಾಗಿ ಈಗ ಆ ಗಿಡಗಳ ಸಂರಕ್ಷಣೆ ಆಗದೇ ಇದ್ದರೆ ಮುಂದಿನ ತಲೆಮಾರಿಗೆ ಶ್ರೇಷ್ಟ ಮಾವು ಸಿಗಲಾರದು ಎಂದು ಉದ್ದೇಶದಿಂದ ಯಾವುದೇ ವಾಣಿಜ್ಯ ಲಾಭ ಬಯಸದೇ ಈ ನಾಡ ಮಾವು ಸಂರಕ್ಷಣೆಯ ಕೆಲಸ ಆರಂಭಿಸಿದ್ದಾರೆ ಡಾ.ಮನೋಹರ ಉಪಾಧ್ಯ ಅವರು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಈ ನಾಲ್ಕು ಜಿಲ್ಲೆಗಳನ್ನು ತೆಗೆದುಕೊಂಡರೇ ಸುಮಾರು ಬಗೆಯ ಮಾವಿನ ತಳಿಗಳು ಇವೆ.ಅದರಲ್ಲಿ ನಮಗೆ ಲಭ್ಯವಾಗುವ ಶ್ರೇಷ್ಟ ತಳಿಗಳನ್ನು ಮಾತ್ರಾ ಇಲ್ಲಿ ದಾಖಲಿಸಿ ಅವುಗಳನ್ನು ನಾಟಿ ಮಾಡಲಾಗುತ್ತದೆ. ಹಣ್ಣು, ಮಿಡಿ ಸೇರಿದಂತೆ ಆ ಮರದ ಗುಣ ಧರ್ಮಗಳನ್ನೂ ದಾಖಲಿಸಿಕೊಂಡು ಕಸಿ ಗಿಡ ನಾಟಿ ಮಾಡಲಾಗುತ್ತಿದೆ. ಹೀಗೆ ಈಗಾಗಲೇ 400 ಕ್ಕೂ ಹೆಚ್ಚು ಗಿಡಗಳ ನಾಟಿ ಆಗಿದೆ. ಇನ್ನಷ್ಟು ಸಂಗ್ರಹವನ್ನು ಮಾಡುತ್ತಾರೆ ಮನೋಹರ ಉಪಾಧ್ಯ. ಹೀಗೆ ಸಂಗ್ರಹವಾದ ಗಿಡಗಳು ಜೀನ್‌ ಬ್ಯಾಂಕ್‌ನಲ್ಲಿ ದಾಖಲಾಗುತ್ತದೆ, ಮುಂದೆ ಯಾರು ಬೇಕಾದರೂ, ಯಾವಾಗ ಬೇಕಾದರೂ ಈ ಗಿಡಗಳಿಂದ ಸಯಾನ್‌ ಪಡೆದು ಗಿಡಗಳನ್ನು ಬೆಳೆಸಬಹುದು ಎನ್ನುತ್ತಾರೆ ಡಾ.ಮನೋಹರ್‌ ಅವರು.

ನಾಟಿ ಮಾಡಿದ ಮಾವಿನ ಗಿಡ

ಮಿತ್ರರು ಶ್ರೇಷ್ಟ ತಳಿಯ ಮಾವಿನ ಗಿಡದ ಬಗ್ಗೆ ಹೇಳಿದರೆ , ಆ ಗಿಡ ಸಯಾನ್‌ ತಂದು ಕಸಿ ಮಾಡಿ ಗಿಡ ಬೆಳೆಸಿ ನಾಟಿ ಮಾಡುತ್ತಿದ್ದಾರೆ ಮನೋಹರ್‌ ಉಪಾಧ್ಯ ಅವರು. ಪರಿಸರದಿಂದ ಬಂದನ್ನು ಪರಿಸರಕ್ಕೆ ಕೊಡುವುದು ಮಾತ್ರಾ ನಮ್ಮ ಕೆಲಸ. ಇಲ್ಲಿ ನಾವೆಲ್ಲಾ ನಿಮಿತ್ತ ಮಾತ್ರಾ ಆಗಿದ್ದೇವೆ. ಪರಿಸರವೇ ಎಲ್ಲವನ್ನೂ ಮಾಡುತ್ತದೆ, ಹಣಕ್ಕಾಗಿ, ಆದಾಯಕ್ಕಾಗಿ ಬೇರೆಯೇ ಉದ್ಯೋಗ ಇದೆ, ಕೃಷಿಯೂ ಇದೆ ಎನ್ನುವ ಮನೋಹರ್‌ ಉಪಾಧ್ಯ ಅವರು, ಇನ್ನಷ್ಟು ಗಿಡಗಳ ಸಂಗ್ರಹದಲ್ಲಿ ಈಗ ತೊಡಗಿದ್ದಾರೆ.

ಡಾ.ಮನೋಹರ ಉಪಾಧ್ಯ

ಮಂಗಳೂರಿನಲ್ಲಿ ಪಶುವೈದ್ಯರಾಗಿ ಕೆಲಸ ಮಾಡುತ್ತಿರುವ ಡಾ.ಮನೋಹರ್‌ ಅವರು ಕೋಡಪದವು ಬಳಿಯ ಕುಕ್ಕಿಲದ ಪ್ರದೇಶದಲ್ಲಿ ಜಾಗ ಖರೀದಿಸಿ ಮಾವು ತಳಿ ಸಂರಕ್ಷಣೆಯ ಕೆಲಸ ಮಾಡುತ್ತಿದ್ದಾರೆ. ಸದ್ಯ ಗಿಡಗಳಿಗೆ ವಾರಕ್ಕೊಮ್ಮೆ ನೀರುಣಿಸುತ್ತಾರೆ. ಗಿಡಗಳ ಆರೈಕೆಯನ್ನೂ, ನಿರ್ವಹಣೆಯನ್ನೂ ನಿರಂತರವಾಗಿ ಮಾಡುತ್ತಿದ್ದಾರೆ. ಈಗಾಘಲೇ ನಾಟಿ ಮಾಡಿರುವ ಪ್ರತೀ ಗಿಡದ ವಿವರವನ್ನು ಪುಸ್ತಕದಲ್ಲಿ ಬರೆದಿರಿಸಿದ್ದಾರೆ. ಗಿಡಗಳ ಸಂಖ್ಯೆಗೆ ಅನುಗುಣವಾಗಿ ವಿವರಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದಾರೆ. ಮುಂದೆ ಆ ಮರದ ಗುಣ ಧರ್ಮಗಳನ್ನೂ ದಾಖಲಾತಿ ಮಾಡಲಾಗುವುದು ಎನ್ನುತ್ತಾರೆ ಮನೋಹರ್‌ ಅವರು. ಸಾಕಷ್ಟು ಕೆಲಸ ಇದೆ, ಆದರೂ ಕೂಡಾ ಮುಂದಿನ ಪೀಳಿಗೆಗೆ, ಪರಿಸರಕ್ಕೆ ಕೊಡುಗೆ ನೀಡಬೇಕಾದ್ದು ಧರ್ಮ ಎಂದು ಈ ಕೆಲಸ ಮಾಡುತ್ತಿದ್ದೇನೆ ಎನ್ನುತ್ತಾರೆ.

ಸುಳ್ಯದ ನಾಮಾಮಿ ತಂಡದಿಂದ ಮಾವಿನ ತೋಟ ವೀಕ್ಷಣೆ
ಫಲವಾಗಿರುವ ಮಾವಿನ ಗಿಡ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

6 minutes ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

3 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

3 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

12 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago