ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ಈ ಕುರಿತು ರೈತರಿಗೆ ಮಾಹಿತಿ ನೀಡಿರುವ ಅವರು, ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ ಮಾಗಿ ಉಳುಮೆ ಎನ್ನುವರು. ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…