Advertisement
MIRROR FOCUS

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

Share

ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳಕ್ಕೆ ಕೃಷಿ ಸಚಿವ ಎನ್.ಚೆಲುವ ನಾರಾಯಣಸ್ವಾಮಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ದೇಶ ಕೃಷಿ ಪ್ರಧಾನವಾಗಿದ್ದು, ಸಣ್ಣ ಹಿಡುವಳಿಗಳಿಂದ ಕೂಡಿದೆ. ಸಣ್ಣ ರೈತರು ಸಮಗ್ರ ಕೃಷಿ ಮತ್ತು ಆಧುನಿಕ ಯಂತ್ರೋಪಕರಣಗಳ ಬಳಕೆಗೆ ಒತ್ತು ನೀಡಿದಾಗ ಸಾಲ ಬಾಧೆಯಿಂದ ಹೊರಬಂದು ಅಭಿವೃದ್ಧಿ ಸಾಧಿಸಲು ಸಾಧ್ಯವಾಗಲಿದೆ ಎಂದರು. ಕೃಷಿ ಕ್ಷೇತ್ರದ ಸಾಧಕ-ಬಾಧಕಗಳ ಕುರಿತು ಚರ್ಚಿಸುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು. ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ ನೀಡುತ್ತಿವೆ. ಸಮಾಜದ ಮುಖ್ಯ ಶ್ರಮಿಕ ವರ್ಗವಾದ ರೈತರು ಸಂಕಷ್ಟಗಳಿಂದ ಹೊರಬರಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ  ಖಾತರಿ ಯೋಜನೆಗಳನ್ನು ಜಾರಿ ಮಾಡಿದೆ ಎಂದರು. ಕೃಷಿಕ ಎಲ್ಲಾ ರೀತಿಯಲ್ಲೂ ಸಬಲನಾಗಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಿ ಸಂಘಟಿಸಿ ಉತ್ಪಾದಕರ ಸರಪಳಿಯನ್ನು ಸದೃಡಗೊಳಿಸಲಾಗುತ್ತಿದೆ. ಸಂಪೂರ್ಣ ಸಹಕಾರಿ ತತ್ವದಡಿಯಲ್ಲಿ ಕೃಷಿ ಉತ್ಪಾದಕರ ಸಂಘಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಈ ವೇಳೆ ರಾಯಚೂರು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ವಿಷ್ಣುವರ್ಧನ, ಜಲಾನಯನ ಇಲಾಖೆ ಆಯುಕ್ತ ಮಹೇಶ್ ಶಿರೂರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

2 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

13 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

14 hours ago