ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳಕ್ಕೆ ಕೃಷಿ ಸಚಿವ ಎನ್.ಚೆಲುವ ನಾರಾಯಣಸ್ವಾಮಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ದೇಶ ಕೃಷಿ ಪ್ರಧಾನವಾಗಿದ್ದು, ಸಣ್ಣ ಹಿಡುವಳಿಗಳಿಂದ ಕೂಡಿದೆ. ಸಣ್ಣ ರೈತರು ಸಮಗ್ರ ಕೃಷಿ ಮತ್ತು ಆಧುನಿಕ ಯಂತ್ರೋಪಕರಣಗಳ ಬಳಕೆಗೆ ಒತ್ತು ನೀಡಿದಾಗ ಸಾಲ ಬಾಧೆಯಿಂದ ಹೊರಬಂದು ಅಭಿವೃದ್ಧಿ ಸಾಧಿಸಲು ಸಾಧ್ಯವಾಗಲಿದೆ ಎಂದರು. ಕೃಷಿ ಕ್ಷೇತ್ರದ ಸಾಧಕ-ಬಾಧಕಗಳ ಕುರಿತು ಚರ್ಚಿಸುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು. ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ ನೀಡುತ್ತಿವೆ. ಸಮಾಜದ ಮುಖ್ಯ ಶ್ರಮಿಕ ವರ್ಗವಾದ ರೈತರು ಸಂಕಷ್ಟಗಳಿಂದ ಹೊರಬರಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಖಾತರಿ ಯೋಜನೆಗಳನ್ನು ಜಾರಿ ಮಾಡಿದೆ ಎಂದರು. ಕೃಷಿಕ ಎಲ್ಲಾ ರೀತಿಯಲ್ಲೂ ಸಬಲನಾಗಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಿ ಸಂಘಟಿಸಿ ಉತ್ಪಾದಕರ ಸರಪಳಿಯನ್ನು ಸದೃಡಗೊಳಿಸಲಾಗುತ್ತಿದೆ. ಸಂಪೂರ್ಣ ಸಹಕಾರಿ ತತ್ವದಡಿಯಲ್ಲಿ ಕೃಷಿ ಉತ್ಪಾದಕರ ಸಂಘಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.
ಈ ವೇಳೆ ರಾಯಚೂರು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ವಿಷ್ಣುವರ್ಧನ, ಜಲಾನಯನ ಇಲಾಖೆ ಆಯುಕ್ತ ಮಹೇಶ್ ಶಿರೂರ್ ಮತ್ತಿತರರು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…