Opinion

ರೈತ ಹಿತಚಿಂತನೆ | ಹುಲಿ ರಕ್ಷಣಾ ಕಾನೂನಿಗಿಂತ ಗೋವು ರಕ್ಷಣಾ ಕಾನೂನಿಗೆ ಮೊದಲು ಆದ್ಯತೆ ನೀಡುವ ಅವಶ್ಯಕತೆ ಬಂದೊದಗಿದೆಯೇ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೀವ ವೈವಿದ್ಯತೆಯಿಂದ ಕೂಡಿದ ಪ್ರಕೃತಿಯು ಉಳಿಯಬೇಕಾದರೆ ಎಲ್ಲ ಜೀವರಾಶಿಗಳ ಅವಶ್ಯಕತೆಯೂ ಕೂಡ ಅಷ್ಟೇ ಇದೆ. ನಾಗರೀಕತೆಗಳು ಮುಂದುವರೆದಂತೆ ಕೆಲವೊಮ್ಮೆ ನಾಗರೀಕರ ಪ್ರಜ್ಞಾರಹಿತ‌ ನಡೆಯಿಂದ ಇತರ ಜೀವರಾಶಿಗಳಿಗೆ ಹಾನಿಯುಂಟಾಗಿ ಅವು ನಶಿಸಿ ಹೋಗುವ ಸಂದರ್ಭ ಸೃಷ್ಟಿಯಾಗುವುದು. ಆ ಸಂದರ್ಭದಲ್ಲಿ ಪ್ರಜ್ಞಾವಂತ ನಾಯಕರ ಆಡಳಿತವಿದ್ದರೆ, ನಶಿಸುತ್ತಿರುವ ಪ್ರಾಣಿಗಳನ್ನು ರಕ್ಷಿಸುವ ಉದ್ದೇಶದಿಂದ ಸೂಕ್ತ ಕಾನೂನು ಜಾರಿಗೆ ತರುವರು. ಈ ನಿಟ್ಟಿನಲ್ಲಿ 50 ವರ್ಷಗಳ ಹಿಂದೆ ಹುಲಿಯ(tiger) ಸಂತತಿ ಗಣನೀಯವಾಗಿ ನಾಶವಾಗುತ್ತಿರುವ ಕಾರಣದಿಂದ ಪ್ರೊಜೆಕ್ಟ ಟೈಗರ್(project tiger) ಎಂಬ ಯೋಜನೆ ಜಾರಿಗೆ ತರುವ ಮೂಲಕ ಹುಲಿಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ(national animal) ಘೋಷಣೆ ಮಾಡಲಾಯಿತು. ಅಂದಿನ ನಾಯಕರ ಪ್ರಜ್ಞಾವಂತ ನಡೆಯಿಂದ ಹುಲಿಗಳ ಸಂಖ್ಯೆ ಕಳೆದ ನಾಲ್ಕು ವರ್ಷದಿಂದ 6 ಪ್ರತಿಶತ ಏರಿಕೆಯಾಗುತ್ತಿದೆ. ಅಂದು ಜಾರಿಗೊಳಿಸಿದ ಯೋಜನೆಯು ಸಫಲತೆ ಕಾಣುತ್ತಿರುವುದು ಸಂತೋಷದ ಸಂಗತಿ.

Advertisement

ಅಂದಿನ ಪ್ರಜ್ಞಾವಂತ ನಾಯಕರ‌‌ ನಡೆಯಿಂದ ನಶಿಸಿ ಹೋಗುತ್ತಿರುವ ಹುಲಿಗಳ ಸಂತತಿ ಇಂದು ಉಳಿದು ಬೆಳೆಯುಂತಹ ವಾತಾವರಣ ನಿರ್ಮಾಣವಾಗಿದೆ. ಹಾಗಾದರೆ, ಇಂದು ನಶಿಸುತ್ತಿರುವ ದೇಸಿ ಗೋವುಗಳ ಪೋಷಣೆ ಹಾಗೂ ರಕ್ಷಣೆಗಾಗಿ ಸೂಕ್ತ ಕಾನೂನು ತರುವುದು ಇಂದಿನ ಪ್ರಜ್ಞಾವಂತ ನಾಯಕರ ಮೊದಲ ಜವಾಬ್ದಾರಿಯಾಗಿದೆ.

ಇಂದು ಪ್ರತಿಯೊಬ್ಬ ಭಾರತೀಯ ರೈತರಿಗೆ ಅವಶ್ಯವಿರುವ ಹಾಗೂ ಜಗತ್ತಿನಲ್ಲಿಯೇ ವಿಶೇಷವಾದ‌ ಗುಣಲಕ್ಷಣ ಹೊಂದಿದ ಹಲವು ದೇಸಿ ಗೋವುಗಳು ನಾಶವಾಗುತ್ತಿವೆ ಎಂಬುದನ್ನು ಹಲವು ಸಮೀಕ್ಷೆಗಳು ಹೇಳುತ್ತಿವೆ. ಕೇವಲ ಗೋವು ರಕ್ಷಣಾ ಕಾನೂನು ಜಾರಿಗೆ ತಂದರೆ ಸಾಲದು, ದೇಸಿ ಗೋವು ಸಾಕಾಣಿಕೆ ಲಾಭದಾಯಕ ವಾಗುವಂತೆ ಮಾಡುವ ಯೋಜನೆಗಳನ್ನು ಜಾರಿಗೆ ತರಬೇಕಾದ ಅವಶ್ಯಕತೆಯಿದೆ. ಏಕೆಂದರೆ ಈಗಾಗಲೇ ಫಲವತ್ತತೆ ಕಳೆದುಕೊಳ್ಳುತ್ತಿರುವ ಮಣ್ಣನ್ನು ಉಳಿಸಬೇಕಾದರೆ ದೇಸಿ ಹಸುಗಳ ಸಗಣಿ ಹಾಗೂ ಗಂಜಲನ್ನು ಯಥೇಚ್ಛವಾಗಿ ಭೂಮಿಗೆ ಸೇರಿಸಬೇಕಾದ ಅವಶ್ಯಕತೆಯಿದೆ. ಇಂದು ಈ ನಿಟ್ಟಿನಲ್ಲಿ ಪ್ರಯತ್ನಿಸುವ ನಾಯಕರಿಗೆ ಮಾತ್ರ ವಾಸ್ತವಿಕ ಸಮಸ್ಯೆಗಳ ಕುರಿತು ಪ್ರಜ್ಞೆ ಇದೆ ಎಂದು ಅರ್ಥವಾಗುತ್ತದೆ. ಪ್ರಜ್ಞಾವಂತ ನಾಯಕರು ಮಾತ್ರ ಆಯಾ ಸಮಯಕ್ಕೆ ಅವಶ್ಯವಿರುವ ಪ್ರಕೃತಿಗೆ ಪೂರಕವಾದ ಕಾನೂನುಗಳನ್ನು ಜಾರಿಗೊಳಿಸಬಲ್ಲರು.

ಐವತ್ತು ವರ್ಷಗಳ ಹಿಂದೆ ನಾಶವಾಗುತ್ತಿರುವ ಹುಲಿ ಸಂತತಿ ಉಳಿಸುವ ಉದ್ದೇಶದಿಂದ ಯೋಜನೆ ಜಾರಿಗೆ ತಂದು ಹುಲಿಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿದಂತೆ, ಇಂದು ನಾಶವಾಗುತ್ತಿರುವ ದೇಸಿ ಗೋವುಗಳನ್ನು ಉಳಿಸಲು ಬೃಹತ್ ಯೋಜನೆ ಜಾರಿಗೊಳಿಸಿ ‘ನಂದಿ’ ಯನ್ನು ಹೊಸದಾಗಿ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡುವ ಅವಶ್ಯಕತೆ ಬಂದೊದಗಿದೆ. ಐವತ್ತು ವರ್ಷಗಳ ಹಿಂದೆ ಹುಲಿಯ ಸಂತತಿ ಉಳಿಸುವ ಯೋಜನೆ ಜಾರಿಗೆ ತರದಿದ್ದರೆ ಇಂದು ಬೆರಳೆಣಿಕೆಯಷ್ಟು ಹುಲಿಗಳೂ ಕೂಡ ಉಳಿಯುತ್ತಿರಲಿಲ್ಲ. ಇದೇ ರೀತಿ ನಾವಿಂದು ದೇಸಿ ಗೋವುಗಳನ್ನು ಉಳಿಸುವುದಕ್ಕಾಗಿ ರಾಷ್ಟ್ರ‌ ಮಟ್ಟದ ಬೃಹತ್ ಯೋಜನೆ ಜಾರಿಗೆ ತರದಿದ್ದರೆ ಮುಂದಿನ ಐವತ್ತು ವರ್ಷಗಳಲ್ಲಿ ದೇಸಿ ಗೋವುಗಳು ಬೆರಳೆಣಿಕೆಯಷ್ಟು ಕೂಡ ಉಳಿಯಲು ಸಾಧ್ಯವಿಲ್ಲ. ಇಂದಿನ ವಾಸ್ತವಿಕ ಪರಿಸ್ಥಿತಿಯನ್ನು ಅರಿತು ದೇಸಿ ಗೋವುಗಳು ಹಾಗೂ ಎತ್ತುಗಳನ್ನು ಸಾಕಾಣಿಕೆ ಮಾಡುತ್ತಿರುವ ಪ್ರಜ್ಞಾವಂತ ರೈತರಿಗೆ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಬೇಕಾದ ಅವಶ್ಯಕತೆಯಿದೆ.

ಪ್ರಜ್ಞಾವಂತ ನಾಯಕರು‌ ಮಾತ್ರ ಆಯಾ ಸಂದರ್ಭದ ಅವಶ್ಯಕತೆಯನ್ನು ಅರಿತು ಸ್ಪಂದಿಸಬಲ್ಲರು. ಭಾರತೀಯ ಕೃಷಿ ಸಂಸ್ಕೃತಿಯ ಆಧಾರ ಸ್ತಂಭವಾದ ದೇಸಿ ಗೋವುಗಳು ಹಾಗೂ ಎತ್ತುಗಳನ್ನು ಉಳಿಸುವ ಯೋಜನೆಗಳನ್ನು ಜಾರಿಗೆ ತರುವಂತಹ ಪ್ರಜ್ಞಾವಂತ ನಾಯಕರಿಗೆ ಮತ ನೀಡಿ ಚುನಾವಣೆಗಳಲ್ಲಿ ಆಯ್ಕೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ನಮ್ಮೆಲ್ಲರಿಗೆ ಆರೋಗ್ಯಯುತ ಆಹಾರ ದೊರೆಯಬೇಕಾದರೆ ಕೃಷಿ ಭೂಮಿಯನ್ನು ಫಲವತ್ತಾಗಿಸುವ ದೇಸಿ ಗೋವುಗಳನ್ನು ಉಳಿಸಲೇಬೇಕಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸೂಕ್ತ ಯೋಜನೆ ಹಾಗೂ ಕಾನೂನು ಜಾರಿಗೆ ತರುವ ನಾಯಕರನ್ನು ಚುನಾವಣೆಗಳಲ್ಲಿ ಆಯ್ಕೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ಪ್ರಜೆಯ ಜವಾಬ್ದಾರಿಯಾಗಿದೆ.

ಬರಹ :
ಬಸವರಾಜ ಬಿರಾದಾರ, ಮಣ್ಣು ಉಳಿಸಿ  ಅಭಿಯಾನದ ಸ್ವಯಂ ಸೇವಕ, ವಿಜಯಪುರ
Due to the actions of the wise leaders of that time, an environment has been created where the descendants of the tigers, which are dying out, remain and thrive today. Therefore, the first responsibility of today's conscious leaders is to bring appropriate laws for the protection and protection of the endangered desi cows.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

3 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

11 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

12 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

21 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

21 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

1 day ago