MIRROR FOCUS

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ ಇಲ್ಲಿದೆ..  

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಾಣಿಲ ಗ್ರಾಮ ಬೇಸಿಗೆ ಬಂತೆಂದರೆ ನೀರಿನ ಅಭಾವವನ್ನು ಎದುರಿಸುತ್ತದೆ. ಈ ನೀರಿನ ಬರವನ್ನು ನಿವಾರಿಸಲು ಗ್ರಾಮದ ಕೃಷಿಕ ಜಾನ್ ಮೊಂತೆರೋ ಸುರಂಗ ಕೊರೆದು ಯಶಸ್ವಿಯಾಗಿದ್ದಾರೆ. ಕೃಷಿ ಕಾಯಕವನ್ನೇ ಉಸಿರಾಗಿಸಿಕೊಂಡಿರುವ ಜಾನ್ ಮೊಂತೆರೋ, ಇಳಿ ವಯಸ್ಸಿನಲ್ಲೂ ಏಕಾಂಗಿಯಾಗಿ ಸುರಂಗ ಕೊರೆದು ಸಾಹಸ ಮಾಡಿದ್ದಾರೆ.

ಮೂಲತಃ ಕೃಷಿ ಕಾರ್ಮಿಕರಾಗಿರುವ  ಜಾನ್ ಮೊಂತೆರೋ   ದಿನವಿಡಿ ಕೂಲಿ ಕೆಲಸ ಮಾಡಿ, ಬಳಿಕ  ಸಂಜೆ 6 ಗಂಟೆಯಿಂದ ತಡರಾತ್ರಿ 12ಗಂಟೆಯವರೆಗೆ ಪ್ರತಿ ದಿನ ತಮ್ಮ  ಜಮೀನಿನಲ್ಲಿ ಸುರಂಗ ಕೊರೆಯುತ್ತಿದ್ದರು.  ಸುಮಾರು 30 ಅಡಿ ಆಳದ  8ಕ್ಕೂ ಹೆಚ್ಚು  ಸುರಂಗಗಳನ್ನು ಕೊರೆದಿದ್ದಾರೆ. ಮೂವತ್ತು ವರ್ಷದ ಪ್ರಾಯದಲ್ಲಿರುವಾಗಲೇ ಮೊಂತೆರೊ, ಸುರಂಗ ಕೊರೆಯುವ ಕಾರ್ಯ  ಆರಂಭಿಸಿದ್ದರು. ಜೀವನದುದ್ದಕ್ಕೂ  ಸುರಂಗವನ್ನು  ಕೊರೆದು  ಜೀವಜಲಕ್ಕಾಗಿ  ಅವರ ಹುಡುಕಾಟ ನಿರಂತರವಾಗಿ ಮುಂದುವರೆಯುತ್ತಿತ್ತು. ಇದೀಗ  ಅವರ ಭಗೀರಥ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಅವರು ಕೊರೆದ ಸುರಂಗಗಳ ಪೈಕಿ ಮೂರು  ಸುರಂಗಗಳಲ್ಲಿ ಇದೀಗ ಅಂತರ್ಜಲ ಇದೆ.  ಸುರಂಗಗಳಿಂದ ನಿರಂತರ ಹರಿಯುತ್ತಿರುವ ಜಲಧಾರೆಯಿಂದ  ಮೊಂತೆರೋ ಅವರ  ಕೃಷಿ ಭೂಮಿ ಹಚ್ಚಹಸಿರಾಗಿ ಕಂಗೊಳಿಸುತ್ತಿದೆ. ಅವರ ತೋಟದಲ್ಲಿ ತೆಂಗು ಕಂಗು, ಭತ್ತ, ಕಾಳು ಮೆಣಸು ಸಮೃದ್ಧವಾಗಿ ಬೆಳೆದು ನಿಂತಿವೆ. ಇದೀಗ  70ರ ಹರೆಯದಲ್ಲಿರುವ  ಮೊಂತೆರೋ, ಈಗಲೂ ಸಹ  ಕೃಷಿ ಕಾಯಕವನ್ನು ನಿಲ್ಲಿಸದೆ  ದಿನವಿಡೀ ತಮ್ಮ ಜಮೀನಿನಲ್ಲಿ  ಭೂತಾಯಿಯ ಸೇವೆಯನ್ನು  ಮುಂದುವರೆಸಿದ್ದಾರೆ.ಕೃಷಿ ತೋಟ ಮಾಡುವ ಸವಾಲಿಗೆ ಎದುರಾಗಿದ್ದು ನೀರಿನ ಸಮಸ್ಯೆ. ಹೀಗಾಗಿ ನೀರಿನ ಸಮಸ್ಯೆಗೆ ತಾವು ಕಂಡುಕೊಂಡಿದ್ದು ಸುರಂಗ ಎಂದು ಹೇಳುತ್ತಾರೆ ಜಾನ್ ಮೊಂತೆರೋ.

ಮೊಂತೆರೋ ಅವರ ದಣಿವರಿಸಿದ ಈ ಉತ್ಸಾಹವನ್ನು ಕಂಡ ಗ್ರಾಮದ ಜನರ ಅವರನ್ನು ಮಾದರಿಯಾಗಿ ಸ್ವೀಕರಿಸಿದ್ದಾರೆ. ಜಾನ್ ಮೊಂತೆರೊ ಅವರ ಈ ಸಾಹಸಕ್ಕೆ ಪತ್ನಿ ದುರ್ಸಿನಾ ಸೋಜಾ ಮತ್ತು ಮಕ್ಕಳು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ.

ಕಷ್ಟಪಟ್ಟು ಛಲದಿಂದ ಭಗೀರಥ ಪ್ರಯತ್ನಪಟ್ಟು ಯಶಸ್ಸು ಸಾಧಿಸಿದ್ದು, ಅವರ ಕೆಲಸಕ್ಕೆ ಮಕ್ಕಳು ಕೂಡ ಸಾಥ್ ಕೊಟ್ಟಿದ್ದಾರೆ ಎನ್ನುತ್ತಾರೆ ಜಾನ್ ಮೊಂತೆರೋ ಪತ್ನಿ ದುರ್ಸಿನಾ ಸೋಜಾ.

ಒಟ್ಟಾರೆಯಾಗಿ  ಜಾನ್ ಮೊಂತೆರೋ ತಮ್ಮ ಈ ವಿನೂತನ ಸಾಹಸದಿಂದಾಗಿ  ಕರ್ನಾಟಕದ ಆಧುನಿಕ ಭಗೀರಥ ಎಂದು ಕರೆಸಿಕೊಂಡಿದ್ದು,  ಯುವಪೀಳಿಗೆಗೂ  ಮಾದರಿಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

1 hour ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

2 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

10 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

21 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

21 hours ago