Advertisement
MIRROR FOCUS

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |

Share

ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ ಇಲ್ಲಿದೆ..  

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಾಣಿಲ ಗ್ರಾಮ ಬೇಸಿಗೆ ಬಂತೆಂದರೆ ನೀರಿನ ಅಭಾವವನ್ನು ಎದುರಿಸುತ್ತದೆ. ಈ ನೀರಿನ ಬರವನ್ನು ನಿವಾರಿಸಲು ಗ್ರಾಮದ ಕೃಷಿಕ ಜಾನ್ ಮೊಂತೆರೋ ಸುರಂಗ ಕೊರೆದು ಯಶಸ್ವಿಯಾಗಿದ್ದಾರೆ. ಕೃಷಿ ಕಾಯಕವನ್ನೇ ಉಸಿರಾಗಿಸಿಕೊಂಡಿರುವ ಜಾನ್ ಮೊಂತೆರೋ, ಇಳಿ ವಯಸ್ಸಿನಲ್ಲೂ ಏಕಾಂಗಿಯಾಗಿ ಸುರಂಗ ಕೊರೆದು ಸಾಹಸ ಮಾಡಿದ್ದಾರೆ.

ಮೂಲತಃ ಕೃಷಿ ಕಾರ್ಮಿಕರಾಗಿರುವ  ಜಾನ್ ಮೊಂತೆರೋ   ದಿನವಿಡಿ ಕೂಲಿ ಕೆಲಸ ಮಾಡಿ, ಬಳಿಕ  ಸಂಜೆ 6 ಗಂಟೆಯಿಂದ ತಡರಾತ್ರಿ 12ಗಂಟೆಯವರೆಗೆ ಪ್ರತಿ ದಿನ ತಮ್ಮ  ಜಮೀನಿನಲ್ಲಿ ಸುರಂಗ ಕೊರೆಯುತ್ತಿದ್ದರು.  ಸುಮಾರು 30 ಅಡಿ ಆಳದ  8ಕ್ಕೂ ಹೆಚ್ಚು  ಸುರಂಗಗಳನ್ನು ಕೊರೆದಿದ್ದಾರೆ. ಮೂವತ್ತು ವರ್ಷದ ಪ್ರಾಯದಲ್ಲಿರುವಾಗಲೇ ಮೊಂತೆರೊ, ಸುರಂಗ ಕೊರೆಯುವ ಕಾರ್ಯ  ಆರಂಭಿಸಿದ್ದರು. ಜೀವನದುದ್ದಕ್ಕೂ  ಸುರಂಗವನ್ನು  ಕೊರೆದು  ಜೀವಜಲಕ್ಕಾಗಿ  ಅವರ ಹುಡುಕಾಟ ನಿರಂತರವಾಗಿ ಮುಂದುವರೆಯುತ್ತಿತ್ತು. ಇದೀಗ  ಅವರ ಭಗೀರಥ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಅವರು ಕೊರೆದ ಸುರಂಗಗಳ ಪೈಕಿ ಮೂರು  ಸುರಂಗಗಳಲ್ಲಿ ಇದೀಗ ಅಂತರ್ಜಲ ಇದೆ.  ಸುರಂಗಗಳಿಂದ ನಿರಂತರ ಹರಿಯುತ್ತಿರುವ ಜಲಧಾರೆಯಿಂದ  ಮೊಂತೆರೋ ಅವರ  ಕೃಷಿ ಭೂಮಿ ಹಚ್ಚಹಸಿರಾಗಿ ಕಂಗೊಳಿಸುತ್ತಿದೆ. ಅವರ ತೋಟದಲ್ಲಿ ತೆಂಗು ಕಂಗು, ಭತ್ತ, ಕಾಳು ಮೆಣಸು ಸಮೃದ್ಧವಾಗಿ ಬೆಳೆದು ನಿಂತಿವೆ. ಇದೀಗ  70ರ ಹರೆಯದಲ್ಲಿರುವ  ಮೊಂತೆರೋ, ಈಗಲೂ ಸಹ  ಕೃಷಿ ಕಾಯಕವನ್ನು ನಿಲ್ಲಿಸದೆ  ದಿನವಿಡೀ ತಮ್ಮ ಜಮೀನಿನಲ್ಲಿ  ಭೂತಾಯಿಯ ಸೇವೆಯನ್ನು  ಮುಂದುವರೆಸಿದ್ದಾರೆ.ಕೃಷಿ ತೋಟ ಮಾಡುವ ಸವಾಲಿಗೆ ಎದುರಾಗಿದ್ದು ನೀರಿನ ಸಮಸ್ಯೆ. ಹೀಗಾಗಿ ನೀರಿನ ಸಮಸ್ಯೆಗೆ ತಾವು ಕಂಡುಕೊಂಡಿದ್ದು ಸುರಂಗ ಎಂದು ಹೇಳುತ್ತಾರೆ ಜಾನ್ ಮೊಂತೆರೋ.

ಮೊಂತೆರೋ ಅವರ ದಣಿವರಿಸಿದ ಈ ಉತ್ಸಾಹವನ್ನು ಕಂಡ ಗ್ರಾಮದ ಜನರ ಅವರನ್ನು ಮಾದರಿಯಾಗಿ ಸ್ವೀಕರಿಸಿದ್ದಾರೆ. ಜಾನ್ ಮೊಂತೆರೊ ಅವರ ಈ ಸಾಹಸಕ್ಕೆ ಪತ್ನಿ ದುರ್ಸಿನಾ ಸೋಜಾ ಮತ್ತು ಮಕ್ಕಳು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ.

ಕಷ್ಟಪಟ್ಟು ಛಲದಿಂದ ಭಗೀರಥ ಪ್ರಯತ್ನಪಟ್ಟು ಯಶಸ್ಸು ಸಾಧಿಸಿದ್ದು, ಅವರ ಕೆಲಸಕ್ಕೆ ಮಕ್ಕಳು ಕೂಡ ಸಾಥ್ ಕೊಟ್ಟಿದ್ದಾರೆ ಎನ್ನುತ್ತಾರೆ ಜಾನ್ ಮೊಂತೆರೋ ಪತ್ನಿ ದುರ್ಸಿನಾ ಸೋಜಾ.

ಒಟ್ಟಾರೆಯಾಗಿ  ಜಾನ್ ಮೊಂತೆರೋ ತಮ್ಮ ಈ ವಿನೂತನ ಸಾಹಸದಿಂದಾಗಿ  ಕರ್ನಾಟಕದ ಆಧುನಿಕ ಭಗೀರಥ ಎಂದು ಕರೆಸಿಕೊಂಡಿದ್ದು,  ಯುವಪೀಳಿಗೆಗೂ  ಮಾದರಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

9 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

9 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

9 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

10 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

10 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

18 hours ago