Advertisement
MIRROR FOCUS

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |

Share

ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ ಇಲ್ಲಿದೆ..  

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಾಣಿಲ ಗ್ರಾಮ ಬೇಸಿಗೆ ಬಂತೆಂದರೆ ನೀರಿನ ಅಭಾವವನ್ನು ಎದುರಿಸುತ್ತದೆ. ಈ ನೀರಿನ ಬರವನ್ನು ನಿವಾರಿಸಲು ಗ್ರಾಮದ ಕೃಷಿಕ ಜಾನ್ ಮೊಂತೆರೋ ಸುರಂಗ ಕೊರೆದು ಯಶಸ್ವಿಯಾಗಿದ್ದಾರೆ. ಕೃಷಿ ಕಾಯಕವನ್ನೇ ಉಸಿರಾಗಿಸಿಕೊಂಡಿರುವ ಜಾನ್ ಮೊಂತೆರೋ, ಇಳಿ ವಯಸ್ಸಿನಲ್ಲೂ ಏಕಾಂಗಿಯಾಗಿ ಸುರಂಗ ಕೊರೆದು ಸಾಹಸ ಮಾಡಿದ್ದಾರೆ.

ಮೂಲತಃ ಕೃಷಿ ಕಾರ್ಮಿಕರಾಗಿರುವ  ಜಾನ್ ಮೊಂತೆರೋ   ದಿನವಿಡಿ ಕೂಲಿ ಕೆಲಸ ಮಾಡಿ, ಬಳಿಕ  ಸಂಜೆ 6 ಗಂಟೆಯಿಂದ ತಡರಾತ್ರಿ 12ಗಂಟೆಯವರೆಗೆ ಪ್ರತಿ ದಿನ ತಮ್ಮ  ಜಮೀನಿನಲ್ಲಿ ಸುರಂಗ ಕೊರೆಯುತ್ತಿದ್ದರು.  ಸುಮಾರು 30 ಅಡಿ ಆಳದ  8ಕ್ಕೂ ಹೆಚ್ಚು  ಸುರಂಗಗಳನ್ನು ಕೊರೆದಿದ್ದಾರೆ. ಮೂವತ್ತು ವರ್ಷದ ಪ್ರಾಯದಲ್ಲಿರುವಾಗಲೇ ಮೊಂತೆರೊ, ಸುರಂಗ ಕೊರೆಯುವ ಕಾರ್ಯ  ಆರಂಭಿಸಿದ್ದರು. ಜೀವನದುದ್ದಕ್ಕೂ  ಸುರಂಗವನ್ನು  ಕೊರೆದು  ಜೀವಜಲಕ್ಕಾಗಿ  ಅವರ ಹುಡುಕಾಟ ನಿರಂತರವಾಗಿ ಮುಂದುವರೆಯುತ್ತಿತ್ತು. ಇದೀಗ  ಅವರ ಭಗೀರಥ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಅವರು ಕೊರೆದ ಸುರಂಗಗಳ ಪೈಕಿ ಮೂರು  ಸುರಂಗಗಳಲ್ಲಿ ಇದೀಗ ಅಂತರ್ಜಲ ಇದೆ.  ಸುರಂಗಗಳಿಂದ ನಿರಂತರ ಹರಿಯುತ್ತಿರುವ ಜಲಧಾರೆಯಿಂದ  ಮೊಂತೆರೋ ಅವರ  ಕೃಷಿ ಭೂಮಿ ಹಚ್ಚಹಸಿರಾಗಿ ಕಂಗೊಳಿಸುತ್ತಿದೆ. ಅವರ ತೋಟದಲ್ಲಿ ತೆಂಗು ಕಂಗು, ಭತ್ತ, ಕಾಳು ಮೆಣಸು ಸಮೃದ್ಧವಾಗಿ ಬೆಳೆದು ನಿಂತಿವೆ. ಇದೀಗ  70ರ ಹರೆಯದಲ್ಲಿರುವ  ಮೊಂತೆರೋ, ಈಗಲೂ ಸಹ  ಕೃಷಿ ಕಾಯಕವನ್ನು ನಿಲ್ಲಿಸದೆ  ದಿನವಿಡೀ ತಮ್ಮ ಜಮೀನಿನಲ್ಲಿ  ಭೂತಾಯಿಯ ಸೇವೆಯನ್ನು  ಮುಂದುವರೆಸಿದ್ದಾರೆ.ಕೃಷಿ ತೋಟ ಮಾಡುವ ಸವಾಲಿಗೆ ಎದುರಾಗಿದ್ದು ನೀರಿನ ಸಮಸ್ಯೆ. ಹೀಗಾಗಿ ನೀರಿನ ಸಮಸ್ಯೆಗೆ ತಾವು ಕಂಡುಕೊಂಡಿದ್ದು ಸುರಂಗ ಎಂದು ಹೇಳುತ್ತಾರೆ ಜಾನ್ ಮೊಂತೆರೋ.

ಮೊಂತೆರೋ ಅವರ ದಣಿವರಿಸಿದ ಈ ಉತ್ಸಾಹವನ್ನು ಕಂಡ ಗ್ರಾಮದ ಜನರ ಅವರನ್ನು ಮಾದರಿಯಾಗಿ ಸ್ವೀಕರಿಸಿದ್ದಾರೆ. ಜಾನ್ ಮೊಂತೆರೊ ಅವರ ಈ ಸಾಹಸಕ್ಕೆ ಪತ್ನಿ ದುರ್ಸಿನಾ ಸೋಜಾ ಮತ್ತು ಮಕ್ಕಳು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ.

ಕಷ್ಟಪಟ್ಟು ಛಲದಿಂದ ಭಗೀರಥ ಪ್ರಯತ್ನಪಟ್ಟು ಯಶಸ್ಸು ಸಾಧಿಸಿದ್ದು, ಅವರ ಕೆಲಸಕ್ಕೆ ಮಕ್ಕಳು ಕೂಡ ಸಾಥ್ ಕೊಟ್ಟಿದ್ದಾರೆ ಎನ್ನುತ್ತಾರೆ ಜಾನ್ ಮೊಂತೆರೋ ಪತ್ನಿ ದುರ್ಸಿನಾ ಸೋಜಾ.

ಒಟ್ಟಾರೆಯಾಗಿ  ಜಾನ್ ಮೊಂತೆರೋ ತಮ್ಮ ಈ ವಿನೂತನ ಸಾಹಸದಿಂದಾಗಿ  ಕರ್ನಾಟಕದ ಆಧುನಿಕ ಭಗೀರಥ ಎಂದು ಕರೆಸಿಕೊಂಡಿದ್ದು,  ಯುವಪೀಳಿಗೆಗೂ  ಮಾದರಿಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

3 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

14 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

19 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

20 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

22 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

23 hours ago