Advertisement
ಕೃಷಿ

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

Share

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ ಯುವ ತಂತ್ರಜ್ಞಾನದ ಸಹಾಯದಿಂದ 1083 ತಳಿಯ 2200 ಬದನೆಕಾಯಿ ಸಸಿಗಳನ್ನು ನೆಟ್ಟು ಉತ್ತಮ ಆದಾಯವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ತೊಟ್ಟಿಲು ಮಾದರಿಯ ಸರಿಯಾದ ಅಂತರ ಹಾಗೂ ನೀರಾವರಿ ಕ್ರಮದೊಂದಿಗೆ ಸಸಿಗಳಿಗೆ ಪೋಷಕಾಂಶ ಸಮರ್ಪಕವಾಗಿ ತಲುಪುವಂತೆ ಮಾಡಿದ್ದಾರೆ. ಮಾತ್ರವಲ್ಲ, ಅವರು ರೂ 12,000 ಮೌಲ್ಯದ ಪ್ಲಾಸ್ಟಿಕ್ ಮಲ್ಚಿಂಗ್ ಶೀಟ್‌ ಗಳು ಮತ್ತು ರೂ 9,000 ಮೌಲ್ಯದ ಡ್ರಿಪ್ ನೀರಾವರಿ ವ್ಯವಸ್ಥೆ ಅಳವಡಿಸಿಕೊಂಡಿದ್ದಾರೆ. ಇದರಿಂದ ನೀರಿನ ಉಳಿತಾಯವಾಗಿದ್ದು, ಹುಲ್ಲು ಬೆಳೆಯುವುದನ್ನು ತಡೆದು, ಬೆಳೆ ಆರೋಗ್ಯಕರವಾಗಿ ಬೆಳೆಯುವುದಕ್ಕೂ ಸಹಾಯವಾಗಿದೆ.

ಅಶೋಕ ಮಾಸಾಳರು ಬದನೆಕಾಯಿ ಬೆಳೆಗಳಿಗೆ ಯಾವುದೇ ರೋಗಗಳು ಬರದಂತೆ ಗಮನವಹಿಸಿ 7 ದಿನಗಳ ಅಂತರದಲ್ಲಿ ಪೋಷಕ ದ್ರವ್ಯಗಳ ಸಿಂಪಡಣೆ ಹಾಗೂ 3 ದಿನಗಳ ಅಂತರದಲ್ಲಿ ಹಾನಿಕಾರಕ ಕೀಟ ನಿರ್ವಹಿಸುತ್ತಾರೆ. ಇವರಿಗೆ ಈ ಕೃಷಿಯಿಂದ ಒಟ್ಟು ಉತ್ಪಾದನೆ 18 ರಿಂದ 20 ಟನ್ ಆಗಿದ್ದು, ಪ್ರತಿ ಕಿಲೋಗೆ ರೂ 40 ರಿಂದ ರೂ 50 ದರ ಸಿಕ್ಕಿದೆ. ಹೀಗಾಗಿ ಕೇವಲ ಒಂದು ಎಕರೆ ಬದನೆ ತೋಟದಿಂದಲೇ 6 ಲಕ್ಷದ ವರೆಗೂ ಆದಾಯ ಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

7 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

12 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

13 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

13 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

21 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

21 hours ago