ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ ಯುವ ತಂತ್ರಜ್ಞಾನದ ಸಹಾಯದಿಂದ 1083 ತಳಿಯ 2200 ಬದನೆಕಾಯಿ ಸಸಿಗಳನ್ನು ನೆಟ್ಟು ಉತ್ತಮ ಆದಾಯವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತೊಟ್ಟಿಲು ಮಾದರಿಯ ಸರಿಯಾದ ಅಂತರ ಹಾಗೂ ನೀರಾವರಿ ಕ್ರಮದೊಂದಿಗೆ ಸಸಿಗಳಿಗೆ ಪೋಷಕಾಂಶ ಸಮರ್ಪಕವಾಗಿ ತಲುಪುವಂತೆ ಮಾಡಿದ್ದಾರೆ. ಮಾತ್ರವಲ್ಲ, ಅವರು ರೂ 12,000 ಮೌಲ್ಯದ ಪ್ಲಾಸ್ಟಿಕ್ ಮಲ್ಚಿಂಗ್ ಶೀಟ್ ಗಳು ಮತ್ತು ರೂ 9,000 ಮೌಲ್ಯದ ಡ್ರಿಪ್ ನೀರಾವರಿ ವ್ಯವಸ್ಥೆ ಅಳವಡಿಸಿಕೊಂಡಿದ್ದಾರೆ. ಇದರಿಂದ ನೀರಿನ ಉಳಿತಾಯವಾಗಿದ್ದು, ಹುಲ್ಲು ಬೆಳೆಯುವುದನ್ನು ತಡೆದು, ಬೆಳೆ ಆರೋಗ್ಯಕರವಾಗಿ ಬೆಳೆಯುವುದಕ್ಕೂ ಸಹಾಯವಾಗಿದೆ.
ಅಶೋಕ ಮಾಸಾಳರು ಬದನೆಕಾಯಿ ಬೆಳೆಗಳಿಗೆ ಯಾವುದೇ ರೋಗಗಳು ಬರದಂತೆ ಗಮನವಹಿಸಿ 7 ದಿನಗಳ ಅಂತರದಲ್ಲಿ ಪೋಷಕ ದ್ರವ್ಯಗಳ ಸಿಂಪಡಣೆ ಹಾಗೂ 3 ದಿನಗಳ ಅಂತರದಲ್ಲಿ ಹಾನಿಕಾರಕ ಕೀಟ ನಿರ್ವಹಿಸುತ್ತಾರೆ. ಇವರಿಗೆ ಈ ಕೃಷಿಯಿಂದ ಒಟ್ಟು ಉತ್ಪಾದನೆ 18 ರಿಂದ 20 ಟನ್ ಆಗಿದ್ದು, ಪ್ರತಿ ಕಿಲೋಗೆ ರೂ 40 ರಿಂದ ರೂ 50 ದರ ಸಿಕ್ಕಿದೆ. ಹೀಗಾಗಿ ಕೇವಲ ಒಂದು ಎಕರೆ ಬದನೆ ತೋಟದಿಂದಲೇ 6 ಲಕ್ಷದ ವರೆಗೂ ಆದಾಯ ಪಡೆದಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…